ಸಂಪುಟ ಪುನಾರಚನೆಗೆ ಪಟ್ಟು: ಕೇಂದ್ರ ಸಂಪುಟವನ್ನು ಸಮಗ್ರವಾಗಿ ಪುನಾರಚನೆ ಮಾಡಿದ ರೀತಿಯಲ್ಲೇ ರಾಜ್ಯದಲ್ಲೂ ಹಲವರನ್ನು ಕೈಬಿಟ್ಟು ಹೊಸಬರಿಗೆ ಸಂಪುಟದಲ್ಲಿ ಅವಕಾಶ ನೀಡುವ ವಿಚಾರವನ್ನು ಪ್ರಸ್ತಾಪಿಸಲಿದ್ದಾರೆ. ಬಹಿರಂಗ ಹೇಳಿಕೆಗಳ ಮೂಲಕ ತಮಗೆ ಇರಿಸು ಮುರಿಸು ಉಂಟು ಮಾಡುತ್ತಿರುವ, ಪದೇ ಪದೇ ತಮ್ಮ ವಿರುದ್ಧ ದೂರುಗಳನ್ನು ನೀಡುತ್ತಿರುವ ಸಚಿವರನ್ನು ಕೈಬಿಡಲು ಅನುಮತಿ ಕೇಳಲಿದ್ದಾರೆ ಎಂದು ಹೇಳಲಾಗಿದೆ.