ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎಂ ಬಿಎಸ್‌ವೈ ಹೇಳಿಕೆ ಆಡಳಿತ ಕುಸಿಯಲು ದಾರಿ: ಎಚ್‌ಡಿಕೆ

Last Updated 6 ಜೂನ್ 2021, 18:44 IST
ಅಕ್ಷರ ಗಾತ್ರ

ಬೆಂಗಳೂರು: ‘ಪಕ್ಷ ಸೂಚಿಸಿದರೆ ರಾಜೀನಾಮೆಗೆ ಸಿದ್ಧ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಬಹಿರಂಗ ಹೇಳಿಕೆ ನೀಡಿರುವುದು ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಕುಸಿಯಲು ದಾರಿಯಾಗಬಹುದು’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಮುಖ್ಯಮಂತ್ರಿ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ‘ರಾಜ್ಯ ಸರ್ಕಾರದ ನಾಯಕತ್ವ ಬದಲಾವಣೆ ಕುರಿತು ಆರು ತಿಂಗಳಿನಿಂದಲೂ ಚರ್ಚೆ ನಡೆಯುತ್ತಿದೆ. ಅಧಿಕಾರಿಗಳು ಯಾರ ಮಾತನ್ನೂ ಕೇಳುತ್ತಿಲ್ಲ ಎಂಬುದಕ್ಕೆ ಮೈಸೂರು ಪ್ರಕರಣ ಸಾಕ್ಷಿ. ಮುಖ್ಯಮಂತ್ರಿಯೇ ಹೀಗೆ ಬಹಿರಂಗ ಹೇಳಿಕೆ ನೀಡಿದರೆ ಆಡಳಿತ ಇನ್ನಷ್ಟು ದುರ್ಬಲಗೊಳ್ಳುತ್ತದೆ’ ಎಂದಿದ್ದಾರೆ.

ನಾಯಕತ್ವ ಬದಲಾವಣೆ ಕುರಿತು ಬಿಜೆಪಿ ನಾಯಕರು ನಾಲ್ಕು ಗೋಡೆಗಳ ನಡುವೆ ತೀರ್ಮಾನ ಮಾಡಬೇಕು. ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಇರಲಿ, ಹೊಸಬರು ಬರಲಿ ಯಾವ ಬದಲಾವಣೆಯೂ ಆಗುವುದಿಲ್ಲ. ಸರ್ಕಾರದಲ್ಲಿ ಇರುವ ಎಲ್ಲರಿಗೂ ತ್ವರಿತವಾಗಿ ಹಣ ಸಂಪಾದಿಸುವುದಷ್ಟೆ ಗುರಿ. ಇಂತಹ ಬೆಳವಣಿಗೆಗಳಿಂದ ರಾಜ್ಯದ ಜನರಿಗೆ ನಷ್ಟವಾಗುತ್ತದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT