ವಿವಿಧ ಇಲಾಖೆಗಳ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ, ಬಿಲ್ ಪಾವತಿಯಲ್ಲಿ ಭ್ರಷ್ಟಾಚಾರ, ಬಿಲ್ ಬಾಕಿ ಮತ್ತಿತರ ವಿಷಯಗಳ ಕುರಿತು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ನೇತೃತ್ವದ ನಿಯೋಗದೊಂದಿಗೆ ಮುಖ್ಯಮಂತ್ರಿ ಏಪ್ರಿಲ್ 25ರಂದು ಸಭೆ ನಡೆಸಿದ್ದರು. ಆ ಸಭೆಯಲ್ಲಿ ಕೈಗೊಂಡ ನಿರ್ಣಯಗಳನ್ನು ಆಧರಿಸಿ ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಮುಖ್ಯ ಕಾರ್ಯದರ್ಶಿಯವರಿಗೆ ಏಪ್ರಿಲ್ 29ರಂದು ಟಿಪ್ಪಣಿ ಕಳುಹಿಸಿದ್ದಾರೆ.