‘ಕೋವಿಡ್ ಸಂದರ್ಭದಲ್ಲಿ ರಾಜ್ಯಕ್ಕೆ ಏನೂ ಮಾಡದೇ ಈಗ ಯೋಗ ಮಾಡಲು ಬಂದಿದ್ದಾರೆ’ ಎಂಬ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರ ಟೀಕೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಮೋದಿಯವರು ಇಡೀ ದೇಶದಲ್ಲಿ ಕೋವಿಡ್ ಯಾವ ರೀತಿ ನಿರ್ವಹಿಸಿದ್ದಾರೆ ಎಂಬುದು ಜಗತ್ತಿಗೇ ಗೊತ್ತಿದೆ. ಭಾರತದಲ್ಲಿ ಕೋವಿಡ್ ನಿರ್ವಹಣೆಗೆ ಜಗತ್ತೇ ಕೊಂಡಾಡಿದೆ. ಕರ್ನಾಟಕಕ್ಕೆ ಸಾವಿರಾರು ಕೋಟಿ ಹಣ ನೀಡಿದ್ದೂ ಅಲ್ಲದೇ, ಔಷಧ, ಲಸಿಕೆ, ವೈದ್ಯಕೀಯ ಉಪಕರಣಗಳು, ಆಮ್ಲಜನಕವನ್ನು ಕೊರತೆ ಆಗದಂತೆ ಪೂರೈಸಿದ್ದಾರೆ. ಮೋದಿಯವರ ಜನಪ್ರಿಯತೆ ಸಹಿಸದೇ ಸಿದ್ದರಾಮಯ್ಯ ಏನೇನೋ ಮಾತನಾಡುತ್ತಾರೆ ಎಂದರು.