ಬೆಂಗಳೂರು: ಕರ್ನಾಟಕ ಹೈಕೋರ್ಟ್ಗೆ ಹೆಚ್ಚುವರಿ ನ್ಯಾಯಮೂರ್ತಿಯನ್ನಾಗಿ ಸಿ.ಎಂ.ಪೂಣಚ್ಚ ಅವರನ್ನು ನೇಮಕ ಮಾಡಿ ಕೇಂದ್ರ ಕಾನೂನು ಸಚಿವಾಲಯ ಬುಧವಾರ ಆದೇಶಿಸಿದೆ.
ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿಗಳ ಮಂಜೂರಾತಿ ಸಂಖ್ಯೆ 62. ಸದ್ಯ 44 ನ್ಯಾಯಮೂರ್ತಿಗಳು ಕಾರ್ಯ ನಿರ್ವಹಿಸುತ್ತಿದ್ದು ಸಿ.ಎಂ.ಪೂಣಚ್ಚ ಅವರ ನೇಮಕದಿಂದ ಈ ಸಂಖ್ಯೆ 45ಕ್ಕೆ ತಲುಪಿದೆ. ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ಮುಂದಿನ ತಿಂಗಳ 3ಕ್ಕೆ ನಿವೃತ್ತರಾಗಲಿದ್ದಾರೆ.