ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶೇಷ ಅನುದಾನ ₹ 5,495 ಕೋಟಿ ಶಿಫಾರಸು ಒಪ್ಪುವಂತೆ ಸಿ.ಎಂ ಮನವಿ

Last Updated 17 ಸೆಪ್ಟೆಂಬರ್ 2020, 19:02 IST
ಅಕ್ಷರ ಗಾತ್ರ

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಗುರುವಾರ ಸಂಜೆ ನವದೆಹಲಿಯಲ್ಲಿ ಭೇಟಿ ಮಾಡಿದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಕರ್ನಾಟಕಕ್ಕೆ 15ನೇ ಹಣಕಾಸು ಆಯೋಗದ ವಿಶೇಷ ಅನುದಾನ ₹ 5,495
ಕೋಟಿ ನೀಡುವಂತೆ ಮಾಡಿದ ಶಿಫಾರಸು ಒಪ್ಪಿಕೊಳ್ಳುವಂತೆ ಮನವಿ ಮಾಡಿದರು.

ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮೀಣ ಭಾಗದ ಸ್ಥಳೀಯ ಸಂಸ್ಥೆಗಳಿಗೆ ಶಿಫಾರಸು ಮಾಡಿದ ಕಾರ್ಯಕ್ಷಮತೆ ಅನುದಾನ ₹ 2100.25 ಕೋಟಿಯಲ್ಲಿ ಈವರೆಗೆ ₹ 869.40 ಕೋಟಿ ಮಾತ್ರ ಬಂದಿದೆ. ಉಳಿದ ₹ 1,230.85 ಕೋಟಿಯನ್ನೂ ಬಿಡುಗಡೆ ಮಾಡುವಂತೆಯೂ ನಿರ್ಮಲಾ ಅವರಿಗೆ ಸಲ್ಲಿಸಿದ ಮನವಿಯಲ್ಲಿ ಮುಖ್ಯಮಂತ್ರಿ ಕೋರಿದ್ದಾರೆ.

ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಅನುದಾನವನ್ನು ಸೂಕ್ತ ಸಮಯದಲ್ಲಿ ಬಿಡುಗಡೆ ಮಾಡಿದ್ದಕ್ಕಾಗಿ ನಿರ್ಮಲಾ ಅವರಿಗೆ ಧನ್ಯವಾದ ಹೇಳಿದ ಅವರು, ಯೋಜನೆಯ ಪರಿಕರಗಳ ಬಾಕಿ ₹ 665.09 ಕೋಟಿ ಮತ್ತು ಕೌಶಲರಹಿತರ ವೇತನದ ಬಾಕಿ ₹ 54.65 ಕೋಟಿಯನ್ನು ಆದಷ್ಟು ಶೀಘ್ರ ಬಿಡುಗಡೆ ಮಾಡುವಂತೆ ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT