<p><strong>ದಾವಣಗೆರೆ</strong>: ‘ಪಠ್ಯಪುಸ್ತಕಗಳ ಮರು ಪರಿಷ್ಕರಣೆ ಬಗ್ಗೆ ವಿವಾದವೆದ್ದಿದೆ. ವಿದ್ಯಾರ್ಥಿಗಳು, ಪೋಷಕರಲ್ಲಿ ಗೊಂದಲ ಸೃಷ್ಟಿಸಬಾರದು. ಶೈಕ್ಷಣಿಕ ಕ್ಷೇತ್ರದ ಘನತೆಯನ್ನು ಉಳಿಸಲು ಮುಖ್ಯಮಂತ್ರಿ ಅವರು ಮಧ್ಯಪ್ರವೇಶ ಮಾಡಬೇಕು’ ಎಂದು ಸಾಹಿತಿ ಬರಗೂರು ರಾಮಚಂದ್ರಪ್ಪ ಹೇಳಿದರು.</p>.<p>‘ಅನೇಕ ಪಠ್ಯಗಳನ್ನು ಕೈಬಿಡಲಾಗಿದೆ. ಬೇರೆ ಪಠ್ಯಗಳನ್ನು ಸೇರಿಸಲಾಗಿದೆ. ಕಾಲಕಾಲಕ್ಕೆ ಪರಿಷ್ಕರಣೆ ಅಗತ್ಯ. ಆದರೆ, ಪರಿಷ್ಕರಣೆಗೆ ಪಠ್ಯಕ್ರಮದ ಚೌಕಟ್ಟು ಇರುತ್ತದೆ. ಆ ಚೌಕಟ್ಟಿನಲ್ಲೇ ಸಂವಿಧಾನದ ಆಶಯಗಳಿಗೆ ಬದ್ಧವಾಗಿ ನಡೆ<br />ಯಬೇಕು’ ಎಂದು ಪ್ರತಿಪಾದಿಸಿದ್ದಾರೆ.</p>.<p>ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ಆಶಯಕ್ಕೆ ವಿರುದ್ಧವಾಗಿ, ಪಠ್ಯಕ್ರಮದ ಚೌಕಟ್ಟು ಮೀರಿ ಪಠ್ಯಪುಸ್ತಕ ರಚನೆ, ಪರಿಷ್ಕರಣೆ, ಮರುಪರಿಷ್ಕರಣೆಗಳು ನಡೆಯಬಾರದು’ ಎಂದು ಅವರು ಹೇಳಿದರು.</p>.<p>‘ನನ್ನ ನೇತೃತ್ವದಲ್ಲಿ ಪಠ್ಯ ಪರಿಷ್ಕರಣೆ ನಡೆದಾಗ ಯಾವ ಕಾರಣಕ್ಕೆ ಯಾವ ಪಠ್ಯ ಸೇರಿಸಲಾಗಿದೆ; ಕೈಬಿಡಲಾಗಿದೆ ಎಂಬ ವಿವರಗಳನ್ನು ಆವಾಗಲೇ ನೀಡಿದ್ದೇನೆ. ವೈಯಕ್ತಿಕವಾಗಿ ಕೆಲವರು ನನ್ನ ಮೇಲೆ ಆರೋಪ ಮಾಡಿದ್ದಾರೆ. ನನ್ನ ತೇಜೋವಧೆ ಮಾಡುವ ಕೆಲಸವಾಗುತ್ತಿದೆ. ಅವರ ಮಟ್ಟಕ್ಕೆ ಇಳಿದು ಪ್ರತಿಕ್ರಿಯೆ ಕೊಡಲಾರೆ. ಆ ಸಂವೇದನೆ, ಮೌಲ್ಯವನ್ನು ಕನ್ನಡ ನನಗೆ ಕಲಿಸಿದೆ’ ಎಂದು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ‘ಪಠ್ಯಪುಸ್ತಕಗಳ ಮರು ಪರಿಷ್ಕರಣೆ ಬಗ್ಗೆ ವಿವಾದವೆದ್ದಿದೆ. ವಿದ್ಯಾರ್ಥಿಗಳು, ಪೋಷಕರಲ್ಲಿ ಗೊಂದಲ ಸೃಷ್ಟಿಸಬಾರದು. ಶೈಕ್ಷಣಿಕ ಕ್ಷೇತ್ರದ ಘನತೆಯನ್ನು ಉಳಿಸಲು ಮುಖ್ಯಮಂತ್ರಿ ಅವರು ಮಧ್ಯಪ್ರವೇಶ ಮಾಡಬೇಕು’ ಎಂದು ಸಾಹಿತಿ ಬರಗೂರು ರಾಮಚಂದ್ರಪ್ಪ ಹೇಳಿದರು.</p>.<p>‘ಅನೇಕ ಪಠ್ಯಗಳನ್ನು ಕೈಬಿಡಲಾಗಿದೆ. ಬೇರೆ ಪಠ್ಯಗಳನ್ನು ಸೇರಿಸಲಾಗಿದೆ. ಕಾಲಕಾಲಕ್ಕೆ ಪರಿಷ್ಕರಣೆ ಅಗತ್ಯ. ಆದರೆ, ಪರಿಷ್ಕರಣೆಗೆ ಪಠ್ಯಕ್ರಮದ ಚೌಕಟ್ಟು ಇರುತ್ತದೆ. ಆ ಚೌಕಟ್ಟಿನಲ್ಲೇ ಸಂವಿಧಾನದ ಆಶಯಗಳಿಗೆ ಬದ್ಧವಾಗಿ ನಡೆ<br />ಯಬೇಕು’ ಎಂದು ಪ್ರತಿಪಾದಿಸಿದ್ದಾರೆ.</p>.<p>ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ಆಶಯಕ್ಕೆ ವಿರುದ್ಧವಾಗಿ, ಪಠ್ಯಕ್ರಮದ ಚೌಕಟ್ಟು ಮೀರಿ ಪಠ್ಯಪುಸ್ತಕ ರಚನೆ, ಪರಿಷ್ಕರಣೆ, ಮರುಪರಿಷ್ಕರಣೆಗಳು ನಡೆಯಬಾರದು’ ಎಂದು ಅವರು ಹೇಳಿದರು.</p>.<p>‘ನನ್ನ ನೇತೃತ್ವದಲ್ಲಿ ಪಠ್ಯ ಪರಿಷ್ಕರಣೆ ನಡೆದಾಗ ಯಾವ ಕಾರಣಕ್ಕೆ ಯಾವ ಪಠ್ಯ ಸೇರಿಸಲಾಗಿದೆ; ಕೈಬಿಡಲಾಗಿದೆ ಎಂಬ ವಿವರಗಳನ್ನು ಆವಾಗಲೇ ನೀಡಿದ್ದೇನೆ. ವೈಯಕ್ತಿಕವಾಗಿ ಕೆಲವರು ನನ್ನ ಮೇಲೆ ಆರೋಪ ಮಾಡಿದ್ದಾರೆ. ನನ್ನ ತೇಜೋವಧೆ ಮಾಡುವ ಕೆಲಸವಾಗುತ್ತಿದೆ. ಅವರ ಮಟ್ಟಕ್ಕೆ ಇಳಿದು ಪ್ರತಿಕ್ರಿಯೆ ಕೊಡಲಾರೆ. ಆ ಸಂವೇದನೆ, ಮೌಲ್ಯವನ್ನು ಕನ್ನಡ ನನಗೆ ಕಲಿಸಿದೆ’ ಎಂದು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>