ಹರಿಹರ (ದಾವಣಗೆರೆ ಜಿಲ್ಲೆ): ಇಲ್ಲಿ ಬುಧವಾರ ನಡೆದ ಬಿಜೆಪಿಯ ಜನ ಸಂಕಲ್ಪ ಯಾತ್ರೆಯಲ್ಲಿ ಟಿಕೆಟ್ ಆಕಾಂಕ್ಷಿಗಳ ಬೆಂಬಲಿಗರು ತಮ್ಮ ನಾಯಕರ ಫೋಟೊ ತೋರಿಸಿ ಶಕ್ತಿ ಪ್ರದರ್ಶಿಸಲು ಮುಂದಾಗಿದ್ದರಿಂದ ಸಿಟ್ಟಿಗೆದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹರಿಹರ ಕ್ಷೇತ್ರದ ಮೂವರು ಆಕಾಂಕ್ಷಿಗಳಿಂದ ‘ಒಗ್ಗಟ್ಟು ಪ್ರದರ್ಶಿಸುತ್ತೇವೆ’ ಎಂದು ಪ್ರಮಾಣ ಮಾಡಿಸಿದರು.