<p><strong>ಬೆಂಗಳೂರು</strong>: ‘ಸರ್ಕಾರದಿಂದ ಬರುತ್ತಿದ್ದ 5 ಕಿಲೋ ಅಕ್ಕಿಯನ್ನು 2 ಕಿಲೋಗೆ ಇಳಿಸಿರುವುದನ್ನು ಪ್ರಶ್ನಿಸಿದ ಬಡ ರೈತನಿಗೆ, ‘ಸತ್ತರೆ ಸಾಯಿ’ ಎಂದು ಹೇಳಿದ ಆಹಾರ ಸಚಿವ ಉಮೇಶ ಕತ್ತಿ ಅವರನ್ನು ಸಚಿವ ಸ್ಥಾನದಿಂದ ತಕ್ಷಣ ವಜಾಗೊಳಿಸಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಒತ್ತಾಯಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಕ್ಕಿ ಕೇಳಿದಾಗ ಈ ರೀತಿ ಹೇಳುವುದಾರೆ ಮಂತ್ರಿಯಾಗಿ ಏಕಿರಬೇಕು. ಕತ್ತಿ ಅವರದು ಉಡಾಫೆ ಮಾತಲ್ಲ, ಹೊಣೆಗಾರಿಕೆ ಪ್ರಶ್ನೆ’ ಎಂದರು.</p>.<p>‘ಕತ್ತಿ ಕ್ಷಮೆ ಕೇಳುವುದು ಬೇಡ. ಕತ್ತಿ ಹೇಳಿಕೆಗೆ ಮುಖ್ಯಮಂತ್ರಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿ ಬಿಜೆಪಿ ಮುಖಂಡರು ಉತ್ತರಿಸಬೇಕು’ ಎಂದೂ ಆಗ್ರಹಿಸಿದರು.</p>.<p>‘ಪಡಿತರ ಚೀಟಿದಾರರಿಗೆ 2 ಕಿಲೋ ಬದಲು 10 ಕಿಲೋ ಅಕ್ಕಿ ನೀಡಬೇಕು ಎಂದು ಆಗ್ರಹಿಸಿ ಪತ್ರ ಚಳವಳಿ ಮೂಲಕ ಮುಖ್ಯಮಂತ್ರಿಗಳನ್ನು ಆಗ್ರಹಿಸುತ್ತೇವೆ. ಪಕ್ಷದ ಎಲ್ಲ ಜಿಲ್ಲೆಗಳ ಅಧ್ಯಕ್ಷರು ಪದಾಧಿಕಾರಿಗಳು, ಕಾರ್ಯಕರ್ತರು ಇದ<br />ರಲ್ಲಿ ಭಾಗವಹಿಸಬೇಕು. ಸಾರ್ವಜನಿಕರು ಕೂಡ ಚಳವಳಿಯಲ್ಲಿ ಭಾಗವಹಿಸಬೇಕು’ ಎಂದು ಮನವಿ ಮಾಡಿದರು.</p>.<p><strong>ಸರ್ಕಾರವೇ ಪೂರೈಸಲಿ</strong>: ‘ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರವೇ ರೆಮ್ಡಿಸಿವಿರ್ ಔಷಧ ಮತ್ತು ಆಕ್ಸಿಜನ್ ಪೂರೈಸಲಿ. ಲಸಿಕೆ ಪಡೆಯಲು ಆನ್ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ಬಡವರು, ಅವಿದ್ಯಾವಂತರು, ಮುಗ್ಧರಿಗೆ ಸಾಧ್ಯವಿಲ್ಲ. ಹೀಗಾಗಿ, ಈ ವ್ಯವಸ್ಥೆ ತಪ್ಪಿಸಿ, ಮನೆ ಬಾಗಿಲಿಗೆ ಹೋಗಿ ಲಸಿಕೆ ನೀಡಬೇಕು’ ಎಂದರು.</p>.<p>‘ಕಳೆದ ವರ್ಷ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಿದ ಖಾಸಗಿ ಆಸ್ಪತ್ರೆಗಳಿಗೆ ಬಾಕಿ ಉಳಿಸಿಕೊಂಡಿರುವ ಹಣವನ್ನು ಸರ್ಕಾರ ತಕ್ಷಣ ಬಿಡುಗಡೆ ಮಾಡಬೇಕು’ ಎಂದೂ ಶಿವಕುಮಾರ್ ಆಗ್ರಹಿಸಿದರು. ಅದಕ್ಕೂ ಮೊದಲು ಪಕ್ಷದ ಜಿಲ್ಲಾ ಅಧ್ಯಕ್ಷರು ಮತ್ತು ಶಾಸಕರ ಜೊತೆ ಸಭೆ ನಡೆಸಿದರು.</p>.<p><strong>ಪ್ರತಿಭಟನೆ</strong>: ಉಮೇಶ ಕತ್ತಿ ಹೇಳಿಕೆ ಖಂಡಿಸಿ ಕಾಂಗ್ರೆಸ್ ಭವನದ ಎದುರು ಪ್ರತಿಭಟನೆ ನಡೆಯಿತು. ಕತ್ತಿ ಅವರ ಅಣಕು ಶವಯಾತ್ರೆ ನಡೆಸಿದ ಕಾರ್ಯಕರ್ತರು ಧಿಕ್ಕಾರ ಕೂಗಿದರು. ಶಿವಕುಮಾರ್ ಹಾಗೂ ಪಕ್ಷದ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಸರ್ಕಾರದಿಂದ ಬರುತ್ತಿದ್ದ 5 ಕಿಲೋ ಅಕ್ಕಿಯನ್ನು 2 ಕಿಲೋಗೆ ಇಳಿಸಿರುವುದನ್ನು ಪ್ರಶ್ನಿಸಿದ ಬಡ ರೈತನಿಗೆ, ‘ಸತ್ತರೆ ಸಾಯಿ’ ಎಂದು ಹೇಳಿದ ಆಹಾರ ಸಚಿವ ಉಮೇಶ ಕತ್ತಿ ಅವರನ್ನು ಸಚಿವ ಸ್ಥಾನದಿಂದ ತಕ್ಷಣ ವಜಾಗೊಳಿಸಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಒತ್ತಾಯಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಕ್ಕಿ ಕೇಳಿದಾಗ ಈ ರೀತಿ ಹೇಳುವುದಾರೆ ಮಂತ್ರಿಯಾಗಿ ಏಕಿರಬೇಕು. ಕತ್ತಿ ಅವರದು ಉಡಾಫೆ ಮಾತಲ್ಲ, ಹೊಣೆಗಾರಿಕೆ ಪ್ರಶ್ನೆ’ ಎಂದರು.</p>.<p>‘ಕತ್ತಿ ಕ್ಷಮೆ ಕೇಳುವುದು ಬೇಡ. ಕತ್ತಿ ಹೇಳಿಕೆಗೆ ಮುಖ್ಯಮಂತ್ರಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿ ಬಿಜೆಪಿ ಮುಖಂಡರು ಉತ್ತರಿಸಬೇಕು’ ಎಂದೂ ಆಗ್ರಹಿಸಿದರು.</p>.<p>‘ಪಡಿತರ ಚೀಟಿದಾರರಿಗೆ 2 ಕಿಲೋ ಬದಲು 10 ಕಿಲೋ ಅಕ್ಕಿ ನೀಡಬೇಕು ಎಂದು ಆಗ್ರಹಿಸಿ ಪತ್ರ ಚಳವಳಿ ಮೂಲಕ ಮುಖ್ಯಮಂತ್ರಿಗಳನ್ನು ಆಗ್ರಹಿಸುತ್ತೇವೆ. ಪಕ್ಷದ ಎಲ್ಲ ಜಿಲ್ಲೆಗಳ ಅಧ್ಯಕ್ಷರು ಪದಾಧಿಕಾರಿಗಳು, ಕಾರ್ಯಕರ್ತರು ಇದ<br />ರಲ್ಲಿ ಭಾಗವಹಿಸಬೇಕು. ಸಾರ್ವಜನಿಕರು ಕೂಡ ಚಳವಳಿಯಲ್ಲಿ ಭಾಗವಹಿಸಬೇಕು’ ಎಂದು ಮನವಿ ಮಾಡಿದರು.</p>.<p><strong>ಸರ್ಕಾರವೇ ಪೂರೈಸಲಿ</strong>: ‘ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರವೇ ರೆಮ್ಡಿಸಿವಿರ್ ಔಷಧ ಮತ್ತು ಆಕ್ಸಿಜನ್ ಪೂರೈಸಲಿ. ಲಸಿಕೆ ಪಡೆಯಲು ಆನ್ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ಬಡವರು, ಅವಿದ್ಯಾವಂತರು, ಮುಗ್ಧರಿಗೆ ಸಾಧ್ಯವಿಲ್ಲ. ಹೀಗಾಗಿ, ಈ ವ್ಯವಸ್ಥೆ ತಪ್ಪಿಸಿ, ಮನೆ ಬಾಗಿಲಿಗೆ ಹೋಗಿ ಲಸಿಕೆ ನೀಡಬೇಕು’ ಎಂದರು.</p>.<p>‘ಕಳೆದ ವರ್ಷ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಿದ ಖಾಸಗಿ ಆಸ್ಪತ್ರೆಗಳಿಗೆ ಬಾಕಿ ಉಳಿಸಿಕೊಂಡಿರುವ ಹಣವನ್ನು ಸರ್ಕಾರ ತಕ್ಷಣ ಬಿಡುಗಡೆ ಮಾಡಬೇಕು’ ಎಂದೂ ಶಿವಕುಮಾರ್ ಆಗ್ರಹಿಸಿದರು. ಅದಕ್ಕೂ ಮೊದಲು ಪಕ್ಷದ ಜಿಲ್ಲಾ ಅಧ್ಯಕ್ಷರು ಮತ್ತು ಶಾಸಕರ ಜೊತೆ ಸಭೆ ನಡೆಸಿದರು.</p>.<p><strong>ಪ್ರತಿಭಟನೆ</strong>: ಉಮೇಶ ಕತ್ತಿ ಹೇಳಿಕೆ ಖಂಡಿಸಿ ಕಾಂಗ್ರೆಸ್ ಭವನದ ಎದುರು ಪ್ರತಿಭಟನೆ ನಡೆಯಿತು. ಕತ್ತಿ ಅವರ ಅಣಕು ಶವಯಾತ್ರೆ ನಡೆಸಿದ ಕಾರ್ಯಕರ್ತರು ಧಿಕ್ಕಾರ ಕೂಗಿದರು. ಶಿವಕುಮಾರ್ ಹಾಗೂ ಪಕ್ಷದ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>