<p>ಬೆಂಗಳೂರು: ‘ಪತ್ರಕರ್ತರಿಗೆ ದೀಪಾವಳಿ ಹಬ್ಬದ ಉಡುಗೊರೆಯ ಜೊತೆ ಹಣ ನೀಡಿದ ಆರೋಪದ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿದ್ದರೆ, ತನಿಖೆ ನಡೆಸಲಿದೆ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.</p>.<p>ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ಈ ವಿಚಾರ ದಲ್ಲಿ ಮೂಗು ತೂರಿಸುವ ಕೆಲಸವನ್ನು ನಾವು ಮಾಡುವುದಿಲ್ಲ’ ಎಂದರು.</p>.<p>‘ಈ ಆರೋಪದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಯಾರು, ಏನು ಆರೋಪ ಮಾಡಿದ್ದಾರೋ ಅವರಿಗೇ ಕೇಳಬೇಕು’ ಎಂದೂ ಹೇಳಿ ದರು.</p>.<p>ಮುಖ್ಯಮಂತ್ರಿತಪ್ಪು ಮಾಡಿರಲಾರರು: ‘ಸುದೀರ್ಘ ಅವಧಿಯಿಂದ ರಾಜಕಾರಣದಲ್ಲಿ ಇರುವ ಮುಖ್ಯಮಂತ್ರಿ, ಮಾಧ್ಯಮದವರಿಗೆ ಹಣದ ಉಡುಗೊರೆ ಕೊಡುವ ತಪ್ಪು ಮಾಡಿರಲಾರರು ಎಂಬುದು ನನ್ನ ಭಾವನೆ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದರು.</p>.<p>ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಪತ್ರಕರ್ತರಿಗೆ ಹಣ ನೀಡಿದ ಬಗ್ಗೆ ನನಗೆ ಅಲ್ಪ ಮಾಹಿತಿಯಷ್ಟೆ ಇದೆ. ಮುಖ್ಯಮಂತ್ರಿ ಹೆಸರಿನಲ್ಲಿ ಯಾರಾದರೂ ಅತಿರೇಕದ ವರ್ತನೆ ತೋರಿಸಿದ್ದರೆ, ಅದನ್ನು ಬಹಳ ಗಂಭೀರವಾಗಿ ಆಲೋಚಿಸಬೇಕಿದೆ.ಈ ವಿಚಾರವಾಗಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಮಾತನಾಡುತ್ತೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ಪತ್ರಕರ್ತರಿಗೆ ದೀಪಾವಳಿ ಹಬ್ಬದ ಉಡುಗೊರೆಯ ಜೊತೆ ಹಣ ನೀಡಿದ ಆರೋಪದ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿದ್ದರೆ, ತನಿಖೆ ನಡೆಸಲಿದೆ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.</p>.<p>ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ಈ ವಿಚಾರ ದಲ್ಲಿ ಮೂಗು ತೂರಿಸುವ ಕೆಲಸವನ್ನು ನಾವು ಮಾಡುವುದಿಲ್ಲ’ ಎಂದರು.</p>.<p>‘ಈ ಆರೋಪದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಯಾರು, ಏನು ಆರೋಪ ಮಾಡಿದ್ದಾರೋ ಅವರಿಗೇ ಕೇಳಬೇಕು’ ಎಂದೂ ಹೇಳಿ ದರು.</p>.<p>ಮುಖ್ಯಮಂತ್ರಿತಪ್ಪು ಮಾಡಿರಲಾರರು: ‘ಸುದೀರ್ಘ ಅವಧಿಯಿಂದ ರಾಜಕಾರಣದಲ್ಲಿ ಇರುವ ಮುಖ್ಯಮಂತ್ರಿ, ಮಾಧ್ಯಮದವರಿಗೆ ಹಣದ ಉಡುಗೊರೆ ಕೊಡುವ ತಪ್ಪು ಮಾಡಿರಲಾರರು ಎಂಬುದು ನನ್ನ ಭಾವನೆ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದರು.</p>.<p>ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಪತ್ರಕರ್ತರಿಗೆ ಹಣ ನೀಡಿದ ಬಗ್ಗೆ ನನಗೆ ಅಲ್ಪ ಮಾಹಿತಿಯಷ್ಟೆ ಇದೆ. ಮುಖ್ಯಮಂತ್ರಿ ಹೆಸರಿನಲ್ಲಿ ಯಾರಾದರೂ ಅತಿರೇಕದ ವರ್ತನೆ ತೋರಿಸಿದ್ದರೆ, ಅದನ್ನು ಬಹಳ ಗಂಭೀರವಾಗಿ ಆಲೋಚಿಸಬೇಕಿದೆ.ಈ ವಿಚಾರವಾಗಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಮಾತನಾಡುತ್ತೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>