ಬೆಂಗಳೂರು: 2020-21ರಲ್ಲಿ ಪಿಯು ತೇರ್ಗಡೆಯಾಗಿ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಈ ವರ್ಷವೂ ಸಿಇಟಿ ಬರೆದಿರುವ 24 ಸಾವಿರ ಅಭ್ಯರ್ಥಿಗಳ ದ್ವಿತೀಯ ಪಿಯು ಅಂಕಗಳನ್ನು ಪರಿಗಣಿಸಿ ರ್ಯಾಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಬೇಕೆಂಬ ಹೈಕೋರ್ಟ್ ತೀರ್ಪಿನಿಂದ ಈ ವರ್ಷದ ವಿದ್ಯಾರ್ಥಿಗಳಿಗೆ ಅನ್ಯಾಯ ಆಗುತ್ತದೆ. ಹಾಗಾಗಿ, ತೀರ್ಪು ಪ್ರಶ್ನಿಸಿ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.