<p><strong>ನವದೆಹಲಿ</strong>: ದೇಶದಲ್ಲಿನ ಶಾಖೋತ್ಪನ್ನ ವಿದ್ಯುತ್ ಸ್ಥಾವರಗಳಲ್ಲಿ ತಲೆದೋರಿರುವ ಕಲ್ಲಿದ್ದಲು ದಾಸ್ತಾನು ಕೊರತೆ ಸಂಬಂಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಕೇಂದ್ರ ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಶಿ ಅವರ ನಡುವೆ ಬುಧವಾರ ಟ್ವೀಟ್ ಸಮರ ನಡೆದಿದೆ.</p>.<p>ಶಾಖೋತ್ಪನ್ನ ವಿದ್ಯುತ್ ಸ್ಥಾವರಗಳಲ್ಲಿ ಕಲ್ಲಿದ್ದಲು ದಾಸ್ತಾನು ಖಾಲಿಯಾಗುತ್ತಿರುವ ಬಗ್ಗೆ ಎನ್ಡಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ‘8 ವರ್ಷಗಳ ದೊಡ್ಡ ಮಾತುಗಳ ಫಲಿತಾಂಶದ ಪರಿಣಾಮ ದೇಶ ಕೇವಲ 8 ದಿನಗಳ ಕಲ್ಲಿದ್ದಲು ದಾಸ್ತಾನು ಇದೆ. ಮೋದಿ ಜೀ, ದಿಗ್ಭ್ರಮೆ ಮೂಡಿಸುತ್ತಿದೆ’ ಎಂದು ಟೀಕಿಸಿ ಟ್ವೀಟ್ ಮಾಡಿದ್ದಾರೆ.</p>.<p>‘ವಿದ್ಯುತ್ ಕಡಿತವು ಸಣ್ಣ ಕೈಗಾರಿಕೆಗಳನ್ನು ಪುಡಿಗಟ್ಟುತ್ತದೆ. ಹೆಚ್ಚಿನ ಉದ್ಯೋಗ ನಷ್ಟಕ್ಕೂ ಕಾರಣವಾಗುತ್ತದೆ. ದ್ವೇಷದ ಬುಲ್ಡೋಜರ್ಗಳನ್ನು ಆಫ್ ಮಾಡಿ ಮತ್ತು ವಿದ್ಯುತ್ ಸ್ಥಾವರಗಳನ್ನು ಆನ್ ಮಾಡಿ!’ ಎಂದು ರಾಹುಲ್ ಟ್ವೀಟ್ನಲ್ಲಿ ಕುಟುಕಿದ್ದಾರೆ.</p>.<p>‘ಕಾಂಗ್ರೆಸ್ ಪಕ್ಷದ ವಿಷಯಗಳನ್ನು ಹೊರತುಪಡಿಸಿ ಎಲ್ಲ ವಿಷಯಗಳಲ್ಲೂ ರಾಹುಲ್ ಗಾಂಧಿಯವರು ಸ್ವಯಂ<br />ಘೋಷಿತ ಪರಿಣಿತರು. ಕಲ್ಲಿದ್ದಲು ಹಗರಣದಲ್ಲಿ ಭಾಗಿಯಾಗಿರುವವರು ಕಲ್ಲಿದ್ದಲು ಉತ್ಪಾದನೆಯ ಬಗ್ಗೆ ಮಾತನಾಡುತ್ತಿದ್ದಾರೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟ್ವೀಟ್ನಲ್ಲೇ, ಎದಿರೇಟು ನೀಡಿದ್ದಾರೆ.</p>.<p>‘ಮಿಸ್ಟರ್ ನಕಲಿ ಗಾಂಧಿ, ಭಯ ಹುಟ್ಟಿಸುವುದನ್ನು ನಿಲ್ಲಿಸಿ, ಬದಲಾಗಿ, ತನ್ನದೇ ಪಕ್ಷದ ಭವಿಷ್ಯದ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಿ’ ಎಂದುರಾಹುಲ್ ವಿರುದ್ಧ ಸಚಿವ ಜೋಶಿ ವಾಗ್ದಾಳಿ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೇಶದಲ್ಲಿನ ಶಾಖೋತ್ಪನ್ನ ವಿದ್ಯುತ್ ಸ್ಥಾವರಗಳಲ್ಲಿ ತಲೆದೋರಿರುವ ಕಲ್ಲಿದ್ದಲು ದಾಸ್ತಾನು ಕೊರತೆ ಸಂಬಂಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಕೇಂದ್ರ ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಶಿ ಅವರ ನಡುವೆ ಬುಧವಾರ ಟ್ವೀಟ್ ಸಮರ ನಡೆದಿದೆ.</p>.<p>ಶಾಖೋತ್ಪನ್ನ ವಿದ್ಯುತ್ ಸ್ಥಾವರಗಳಲ್ಲಿ ಕಲ್ಲಿದ್ದಲು ದಾಸ್ತಾನು ಖಾಲಿಯಾಗುತ್ತಿರುವ ಬಗ್ಗೆ ಎನ್ಡಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ‘8 ವರ್ಷಗಳ ದೊಡ್ಡ ಮಾತುಗಳ ಫಲಿತಾಂಶದ ಪರಿಣಾಮ ದೇಶ ಕೇವಲ 8 ದಿನಗಳ ಕಲ್ಲಿದ್ದಲು ದಾಸ್ತಾನು ಇದೆ. ಮೋದಿ ಜೀ, ದಿಗ್ಭ್ರಮೆ ಮೂಡಿಸುತ್ತಿದೆ’ ಎಂದು ಟೀಕಿಸಿ ಟ್ವೀಟ್ ಮಾಡಿದ್ದಾರೆ.</p>.<p>‘ವಿದ್ಯುತ್ ಕಡಿತವು ಸಣ್ಣ ಕೈಗಾರಿಕೆಗಳನ್ನು ಪುಡಿಗಟ್ಟುತ್ತದೆ. ಹೆಚ್ಚಿನ ಉದ್ಯೋಗ ನಷ್ಟಕ್ಕೂ ಕಾರಣವಾಗುತ್ತದೆ. ದ್ವೇಷದ ಬುಲ್ಡೋಜರ್ಗಳನ್ನು ಆಫ್ ಮಾಡಿ ಮತ್ತು ವಿದ್ಯುತ್ ಸ್ಥಾವರಗಳನ್ನು ಆನ್ ಮಾಡಿ!’ ಎಂದು ರಾಹುಲ್ ಟ್ವೀಟ್ನಲ್ಲಿ ಕುಟುಕಿದ್ದಾರೆ.</p>.<p>‘ಕಾಂಗ್ರೆಸ್ ಪಕ್ಷದ ವಿಷಯಗಳನ್ನು ಹೊರತುಪಡಿಸಿ ಎಲ್ಲ ವಿಷಯಗಳಲ್ಲೂ ರಾಹುಲ್ ಗಾಂಧಿಯವರು ಸ್ವಯಂ<br />ಘೋಷಿತ ಪರಿಣಿತರು. ಕಲ್ಲಿದ್ದಲು ಹಗರಣದಲ್ಲಿ ಭಾಗಿಯಾಗಿರುವವರು ಕಲ್ಲಿದ್ದಲು ಉತ್ಪಾದನೆಯ ಬಗ್ಗೆ ಮಾತನಾಡುತ್ತಿದ್ದಾರೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟ್ವೀಟ್ನಲ್ಲೇ, ಎದಿರೇಟು ನೀಡಿದ್ದಾರೆ.</p>.<p>‘ಮಿಸ್ಟರ್ ನಕಲಿ ಗಾಂಧಿ, ಭಯ ಹುಟ್ಟಿಸುವುದನ್ನು ನಿಲ್ಲಿಸಿ, ಬದಲಾಗಿ, ತನ್ನದೇ ಪಕ್ಷದ ಭವಿಷ್ಯದ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಿ’ ಎಂದುರಾಹುಲ್ ವಿರುದ್ಧ ಸಚಿವ ಜೋಶಿ ವಾಗ್ದಾಳಿ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>