ಶಾಖೋತ್ಪನ್ನ ವಿದ್ಯುತ್ ಸ್ಥಾವರಗಳಲ್ಲಿ ಕಲ್ಲಿದ್ದಲು ದಾಸ್ತಾನು ಖಾಲಿಯಾಗುತ್ತಿರುವ ಬಗ್ಗೆ ಎನ್ಡಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ‘8 ವರ್ಷಗಳ ದೊಡ್ಡ ಮಾತುಗಳ ಫಲಿತಾಂಶದ ಪರಿಣಾಮ ದೇಶ ಕೇವಲ 8 ದಿನಗಳ ಕಲ್ಲಿದ್ದಲು ದಾಸ್ತಾನು ಇದೆ. ಮೋದಿ ಜೀ, ದಿಗ್ಭ್ರಮೆ ಮೂಡಿಸುತ್ತಿದೆ’ ಎಂದು ಟೀಕಿಸಿ ಟ್ವೀಟ್ ಮಾಡಿದ್ದಾರೆ.