<p><strong>ಬೆಂಗಳೂರು:</strong> ಕಲಬೆರಕೆ ಕಾಫಿ ಪುಡಿ ಮಾರಾಟ ಮಾಡಿದ್ದ ಪ್ರಕರಣದ ಅಪರಾಧಿಗೆ ಹಾಸನದ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ವಿಧಿಸಿದ್ದ ಜೈಲು ಶಿಕ್ಷೆಯನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.</p>.<p>ಶಿಕ್ಷೆ ರದ್ದು ಕೋರಿ ಸಕಲೇಶಪುರದ ‘ಸೆಲೆಕ್ಟ್ ಕಾಫಿ ವರ್ಕ್ಸ್’ ಮಾಲೀಕ ಸಯ್ಯದ್ ಅಹ್ಮದ್ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ಎಚ್.ಬಿ.ಪ್ರಭಾಕರ ಶಾಸ್ತ್ರಿ ಅವರಿದ್ದ ಏಕಸದಸ್ಯ ಪೀಠ ವಜಾಗೊಳಿಸಿದೆ.</p>.<p><strong>ಪ್ರಕರಣವೇನು?:</strong> ಪೊಟ್ಟಣದ ಮೇಲೆ ಬ್ಯಾಚ್ ಸಂಖ್ಯೆ ಹಾಗೂ ಎಕ್ಸ್ಪೈರಿ ದಿನಾಂಕ ನಮೂದಿಸದೆ ಕಾಫಿ ಪುಡಿ ಮಾರಿದ್ದ ಹಿನ್ನೆಲೆಯಲ್ಲಿವಿಚಾರಣಾ ನ್ಯಾಯಾಲಯ 6 ತಿಂಗಳುಸಜೆ ಹಾಗೂ ₹ 1 ಸಾವಿರ ದಂಡ ವಿಧಿಸಿತ್ತು. ಈ ಆದೇಶ ವನ್ನು ಎತ್ತಿ ಹಿಡಿದಿರುವ ನ್ಯಾಯಪೀಠ, ‘ಅರ್ಜಿದಾರರು 45 ದಿನಗಳಲ್ಲಿ ಸಕಲೇಶಪುರದ ಜೆಎಂಎಫ್ಸಿ ಕೋರ್ಟ್ಗೆ ಶರಣಾಗಿ ಶಿಕ್ಷೆ ಅನುಭವಿಸಬೇಕು’ ಎಂದು ತೀರ್ಪು ನೀಡಿದೆ.</p>.<p>‘ಆಹಾರ ಪದಾರ್ಥಗಳ ಮೇಲೆ ಬ್ಯಾಚ್ ಸಂಖ್ಯೆ, ಎಕ್ಸ್ಪೈರಿದಿನ, ಸಸ್ಯಾಹಾರ-ಮಾಂಸಾಹಾರ ಚಿಹ್ನೆ ನಮೂದಿಸದೆ ಮಾರುವುದು ಕಾಯ್ದೆಯಡಿ ಶಿಕ್ಷಾರ್ಹ ಅಪರಾಧ’ ಎಂದು ನ್ಯಾಯಪೀಠ ಎಚ್ಚರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕಲಬೆರಕೆ ಕಾಫಿ ಪುಡಿ ಮಾರಾಟ ಮಾಡಿದ್ದ ಪ್ರಕರಣದ ಅಪರಾಧಿಗೆ ಹಾಸನದ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ವಿಧಿಸಿದ್ದ ಜೈಲು ಶಿಕ್ಷೆಯನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.</p>.<p>ಶಿಕ್ಷೆ ರದ್ದು ಕೋರಿ ಸಕಲೇಶಪುರದ ‘ಸೆಲೆಕ್ಟ್ ಕಾಫಿ ವರ್ಕ್ಸ್’ ಮಾಲೀಕ ಸಯ್ಯದ್ ಅಹ್ಮದ್ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ಎಚ್.ಬಿ.ಪ್ರಭಾಕರ ಶಾಸ್ತ್ರಿ ಅವರಿದ್ದ ಏಕಸದಸ್ಯ ಪೀಠ ವಜಾಗೊಳಿಸಿದೆ.</p>.<p><strong>ಪ್ರಕರಣವೇನು?:</strong> ಪೊಟ್ಟಣದ ಮೇಲೆ ಬ್ಯಾಚ್ ಸಂಖ್ಯೆ ಹಾಗೂ ಎಕ್ಸ್ಪೈರಿ ದಿನಾಂಕ ನಮೂದಿಸದೆ ಕಾಫಿ ಪುಡಿ ಮಾರಿದ್ದ ಹಿನ್ನೆಲೆಯಲ್ಲಿವಿಚಾರಣಾ ನ್ಯಾಯಾಲಯ 6 ತಿಂಗಳುಸಜೆ ಹಾಗೂ ₹ 1 ಸಾವಿರ ದಂಡ ವಿಧಿಸಿತ್ತು. ಈ ಆದೇಶ ವನ್ನು ಎತ್ತಿ ಹಿಡಿದಿರುವ ನ್ಯಾಯಪೀಠ, ‘ಅರ್ಜಿದಾರರು 45 ದಿನಗಳಲ್ಲಿ ಸಕಲೇಶಪುರದ ಜೆಎಂಎಫ್ಸಿ ಕೋರ್ಟ್ಗೆ ಶರಣಾಗಿ ಶಿಕ್ಷೆ ಅನುಭವಿಸಬೇಕು’ ಎಂದು ತೀರ್ಪು ನೀಡಿದೆ.</p>.<p>‘ಆಹಾರ ಪದಾರ್ಥಗಳ ಮೇಲೆ ಬ್ಯಾಚ್ ಸಂಖ್ಯೆ, ಎಕ್ಸ್ಪೈರಿದಿನ, ಸಸ್ಯಾಹಾರ-ಮಾಂಸಾಹಾರ ಚಿಹ್ನೆ ನಮೂದಿಸದೆ ಮಾರುವುದು ಕಾಯ್ದೆಯಡಿ ಶಿಕ್ಷಾರ್ಹ ಅಪರಾಧ’ ಎಂದು ನ್ಯಾಯಪೀಠ ಎಚ್ಚರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>