‘ಲಯಸ್ಮಿತಾ ಜೊತೆ ಗಲಾಟೆ ಮಾಡಿದ್ದ ಆರೋಪಿ, ಏಕಾಏಕಿ ಚಾಕುವಿನಿಂದ ದೇಹದ ವಿವಿಧ ಭಾಗಗಳಿಗೆ ಇರಿದಿದ್ದ. ನಂತರ, ತಾನೂ ಚಾಕುವಿನಿಂದ ಇರಿದುಕೊಂಡಿದ್ದ. ಅದನ್ನು ನೋಡಿದ್ದ ಸಹಪಾಠಿಗಳು ಹಾಗೂ ಭದ್ರತಾ ಸಿಬ್ಬಂದಿ, ಇಬ್ಬರನ್ನೂ ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ, ತೀವ್ರ ರಕ್ತಸ್ರಾವದಿಂದ ಲಯಸ್ಮಿತಾ ಮೃತಪಟ್ಟಿದ್ದಾರೆ. ಪವನ್ ಕಲ್ಯಾಣ ಆರೋಗ್ಯ ಸ್ಥಿತಿಯೂ ಚಿಂತಾಜನಕವಾಗಿದೆ’ ಎಂದು ತಿಳಿಸಿವೆ.