ಮಗುವಿನ ತಂದೆ ಮತ್ತು ತಾಯಿ ಇಬ್ಬರೂ ಶ್ರವಣದೋಷ ಸಮಸ್ಯೆ ಎದುರಿಸುತ್ತಿದ್ದರು. ಅವರು ಆಂಧ್ರಪ್ರದೇಶದ ಹಿಂದುಪುರದವರು. ಮಹಿಳೆಯು ಅಲ್ಲಿನ ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿಕೊಂಡಾಗ ವೈದ್ಯರು ಹೆರಿಗೆ ವೇಳೆ ಅಪಾಯ ಇರುವುದನ್ನು ಗುರುತಿಸಿ, ಇಲ್ಲಿಗೆ ಶಿಫಾರಸು ಮಾಡಿದರು. 27 ವಾರಗಳ ಗರ್ಭಿಣಿಯಾಗಿದ್ದ ಅವರಿಗೆ ತೀವ್ರ ರಕ್ತಸ್ರಾವವಾಗುತ್ತಿತ್ತು. ಇದರಿಂದಾಗಿ ವೈದ್ಯರು ಕುಟುಂಬದ ಸದಸ್ಯರೊಂದಿಗೆ ಚರ್ಚಿಸಿ, ಶಸ್ತ್ರಚಿಕಿತ್ಸೆಯ ಮೂಲಕ ಮಗುವನ್ನು ಹೊರತೆಗೆದರು ಎಂದು ಆಸ್ಪತ್ರೆ ತಿಳಿಸಿದೆ.