‘ನೂತನ ರಾಷ್ಟ್ರೀಯ ಶಿಕ್ಷಣ ನೀತಿಗೆ (ಎನ್ಇಪಿ) ಪೂರಕವಾಗಿ ನಾವು ‘ಕಾಮೆಡ್ ಕೇರ್ಸ್’ ಹೆಸರಿನಡಿ ಸುಧಾರಿತ ಕೌಶಲ ಕೇಂದ್ರಗಳನ್ನು ಆರಂಭಿಸುತ್ತಿದ್ದೇವೆ. ಕಲಬುರಗಿ, ಧಾರವಾಡ, ಬೆಳಗಾವಿ, ಶಿವಮೊಗ್ಗ, ಹಾಸನ, ಮೈಸೂರು, ಬೆಂಗಳೂರು ಹಾಗೂ ದಕ್ಷಿಣ ಕನ್ನಡದಲ್ಲಿ ಇವು ಕಾರ್ಯನಿರ್ವಹಿಸುತ್ತವೆ. ಗ್ರಾಮೀಣ ಭಾಗದ ಹಾಗೂ ಮೂಲ ಸೌಕರ್ಯಗಳಿಂದ ವಂಚಿತರಾಗಿರುವ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಆಧುನಿಕ ತಂತ್ರಜ್ಞಾನಗಳ ಬಗೆಗೆ ಅಗತ್ಯ ಜ್ಞಾನ ಒದಗಿಸುವುದು, ಆ ಮೂಲಕ ಅವರನ್ನು ಉದ್ಯೋಗಕ್ಕೆ ಅಣಿಗೊಳಿಸುವುದು ಈ ಕೇಂದ್ರಗಳ ಉದ್ದೇಶ’ ಎಂದು ಮಾಹಿತಿ ನೀಡಿದರು.