ಆಮ್ ಆದ್ಮಿ ಪಕ್ಷ ಸೇರಿದ ಹಾಸ್ಯ ನಟ ಟೆನ್ನಿಸ್ ಕೃಷ್ಣ

ಬೆಂಗಳೂರು: ಚಂದನವನದ ಹಾಸ್ಯ ನಟ ಟಿನ್ನಿಸ್ ಕೃಷ್ಣ ಅವರು ಗುರುವಾರ ಅಧಿಕೃತವಾಗಿ ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ಸೇರ್ಪಡೆಯಾಗಿದ್ದಾರೆ.
ಪಂಜಾಬ್ ಮತ್ತು ದೆಹಲಿಯಲ್ಲಿ ಸರ್ಕಾರ ರಚನೆ ಮಾಡಿರುವ ಎಎಪಿಗೆ ಅವರನ್ನು ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಬರಮಾಡಿಕೊಂಡರು.
ಕನ್ನಡ ಚಿತ್ರರಂಗದ ಹಿರಿಯ ಹಾಸ್ಯ ಕಲಾವಿದ ಶ್ರೀ ಟೆನ್ನಿಸ್ ಕೃಷ್ಣ ಅವರು ಇಂದು ಎಎಪಿ ಕುಟುಂಬಕ್ಕೆ ಸೇರ್ಪಡೆಯಾದರು.
Noted comedian of KFI Sri Tennis Krishna joined the AAP family today. Hearty welcome sir.@aapkaprithvi @MohanDasari_ pic.twitter.com/U4cnzg2Dq3
— AAP Bengaluru (@AAPBangalore) August 4, 2022
ಪಕ್ಷಕ್ಕೆ ಸೆರ್ಪಡೆಯಾದ ಬಳಿಕ ಟೆನ್ನಿಸ್ ಕೃಷ್ಣ ಮಾತನಾಡಿ ‘ಅಧಿಕಾರಕ್ಕಾಗಿ ಪಕ್ಷಕ್ಕೆ ಸೇರಿಲ್ಲ. ಜನಸೇವೆಗಾಗಿ ಸೇರಿದ್ದೇನೆ’ ಎಂದು ಹೇಳಿದರು. ಈ ಹಿಂದೆ ಮತ್ತೊಬ್ಬ ಹಾಸ್ಯನಟ ಮುಖ್ಯಮಂತ್ರಿ ಚಂದ್ರು ಕೂಡ ಎಎಪಿ ಸೇರಿದ್ದಾರೆ.
ಇಲ್ಲಿನ ಖಾಸಗಿ ಹೊಟೇಲ್ನಲ್ಲಿ ನಡೆದ ಸರಳ ಸಮಾರಂಭದಲ್ಲಿ ಪೃಥ್ವಿ ರೆಡ್ಡಿ ಸೇರಿದಂತೆ ಪಕ್ಷದ ಅನೇಕ ಮುಖಂಡರು ಇದ್ದರು.
ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯನಟ ಟೆನ್ನಿಸ್ ಕೃಷ್ಣ ಎಎಪಿ ಕುಟುಂಬಕ್ಕೆ ಸೇರ್ಪಡೆಯಾಗಿದ್ದಾರೆ.
Kannada film industry's renowned comedian Tennis Krishna is now a member of the AAP family.https://t.co/WXcRL1IidY@aapkaprithvi @MohanDasari_ @jagdishsadam @Channappanellur— AAP Bengaluru (@AAPBangalore) August 4, 2022
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.