ಬೆಂಗಳೂರು: ರಾಜಕೀಯ ಹಿಂದುಳಿದಿರುವಿಕೆ ಗುರುತಿಸಲು ಆಯೋಗ ರಚಿಸಲು ತೀರ್ಮಾನಿಸಿರುವುದಾಗಿ ಕಾನೂನು ಮತ್ತು ಸಂಸದೀಯ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.
ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ನೀಡುವ ಸಂಬಂಧ ಗುರುವಾರ ನಡೆದ ಸರ್ವ ಪಕ್ಷಗಳ ಸಭೆಯ ಬಳಿಕ ಅವರು ಸುದ್ದಿಗಾರರಿಗೆ ಈ ಮಾಹಿತಿ ನೀಡಿದರು.
ರಾಜಕೀಯವಾಗಿ ಹಿಂದುಳಿದಿರುವಿಕೆ ಗುರುತಿಸಲು ನಿಖರ ಮಾಹಿತಿ ಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿತ್ತು. ಆದ್ದರಿಂದ ಆಯೋಗ ರಚಿಸಿ ಕಾಲ ಮಿತಿಯಲ್ಲಿ ಮಾಹಿತಿ ಸಂಗ್ರಹಿಸಿ, ವರದಿ ಪಡೆದು ಬಳಿಕಸುಪ್ರೀಂ ಕೋರ್ಟ್ಗೆ ಪ್ರಮಾಣಪತ್ರ ಸಲ್ಲಿಸಲಾಗುವುದು ಎಂದು ಅವರು ಹೇಳಿದರು.