‘14 ವರ್ಷಗಳಿಂದ ಕಷ್ಟಪಟ್ಟು ಸಮುದಾಯವನ್ನು ಒಗ್ಗೂಡಿಸಿದ್ದೇನೆ. ಕೂಡಲಸಂಗಮ ಶ್ರೀಗಳ ಪ್ರಭಾವ ಹೆಚ್ಚಾಗುತ್ತಿದೆ ಎಂಬ ಹೊಟ್ಟೆಕಿಚ್ಚಿನಿಂದ ಕೆಲವರು ಈ ಹುನ್ನಾರ ನಡೆಸಿದ್ದಾರೆ. ಪಂಚಮಸಾಲಿ ಪೀಠವೇ ನಮ್ಮ ಪೀಠ. ಅವರು ಬೇಕಾದರೆ ಮನೆಗೊಂದು, ಊರಿಗೊಂದು ಪೀಠ ಮಾಡಿಕೊಳ್ಳಲಿ. ಪಂಚಮಸಾಲಿಗೆ
2ಎ ಮೀಸಲಾತಿ ಕೊಡಿಸುವುದಷ್ಟೇ ನಮ್ಮ ಗುರಿ. ಏನೇ ಮಾಡಿದರೂ ನಮ್ಮ ಹೋರಾಟ ನಿಲ್ಲುವುದಿಲ್ಲ. ಸದ್ಯದಲ್ಲೇ ಜಯ ಸಿಗಲಿದೆ’ ಎಂದು ಸ್ವಾಮೀಜಿ ಹೇಳಿದರು.