‘ಮೀಸಲಾತಿ ಬಿಕ್ಕಟ್ಟನ್ನು ಶಾಶ್ವತವಾಗಿ ಪರಿಹರಿಸುವ ಪ್ರಾಮಾಣಿಕ ಉದ್ದೇಶವನ್ನು ಮುಖ್ಯಮಂತ್ರಿ ಹೊಂದಿದ್ದರೆ, ಪೂರ್ಣಗೊಂಡು ಸಿದ್ಧ ಇರುವ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯ ವರದಿಯನ್ನು ಒಪ್ಪಿಕೊಂಡು ಅನುಷ್ಠಾನಗೊಳಿಸಲಿ. ಮೀಸಲಾತಿ ಹೆಚ್ಚಳ ಮತ್ತು ಪ್ರವರ್ಗಗಳ ಬದಲಾವಣೆ ಬೇಡಿಕೆಯನ್ನು ಮೀಸಲಾತಿ ಹೆಚ್ಚಳದ ಮೂಲಕ ಮಾತ್ರ ಶಾಶ್ವತವಾಗಿ ಪರಿಹರಿಸಲು ಸಾಧ್ಯ. ರಾಜ್ಯ ಸರ್ಕಾರ ತಕ್ಷಣ ಈ ಬೇಡಿಕೆಯನ್ನು ಕೇಂದ್ರ ಸರ್ಕಾರದ ಮುಂದಿಟ್ಟು ಒತ್ತಾಯಿಸಬೇಕು’ ಎಂದು ಅವರು ಆಗ್ರಹಿಸಿದ್ದಾರೆ.