<p>ಬೆಂಗಳೂರು: ಶಾಸನ ಸಭೆಗಳ ಪೀಠಾಧಿಕಾರಿಗಳ ಅಧಿಕಾರದಲ್ಲಿ ಏಕರೂಪತೆ ಮತ್ತು ಸ್ಪಷ್ಟತೆ ತರುವುದಕ್ಕೆ ಸಂಬಂಧಿಸಿದಂತೆ ಸಂವಿಧಾನದ 10ನೇ ಪರಿಚ್ಛೇದದ ತಿದ್ದುಪಡಿಯ ಶಿಫಾರಸುಗಳ ಕರಡನ್ನು ಶೀಘ್ರದಲ್ಲಿ ಸಲ್ಲಿಸಲಾಗುವುದು ಎಂದು ಕರಡು ರಚನಾ ಸಮಿತಿ ಸದಸ್ಯರಾಗಿರುವ ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.</p>.<p>ವಿಧಾನಸಭೆಯ ಅಧ್ಯಕ್ಷರ ಸಮಾವೇಶದಲ್ಲಿ ರಾಜಸ್ತಾನ ವಿಧಾನಸಭೆಯ ಅಧ್ಯಕ್ಷ ಚಂದ್ರ ಪ್ರಕಾಶ್ ಜೋಶಿ ಅಧ್ಯಕ್ಷತೆಯ ಸಮಿತಿ ನೇಮಕ ಮಾಡಲಾಗಿತ್ತು. ವಿಶ್ವೇಶ್ವರ ಹೆಗಡೆ ಕಾಗೇರಿ, ಒಡಿಶಾ ಮತ್ತು ನಾಗಾಲ್ಯಾಂಡ್ ವಿಧಾನಸಭೆಗಳ ಅಧ್ಯಕ್ಷರೂ ಸಮಿತಿಯ ಸದಸ್ಯರಾಗಿದ್ದಾರೆ. ಸೋಮವಾರ ವರ್ಚ್ಯುಯಲ್ ಆಗಿ ಸಮಿತಿಯ ಸಭೆ ನಡೆದಿದೆ.</p>.<p>‘ಶಾಸನಸಭೆಗಳ ಪೀಠಾಧಿಕಾರಿಗಳ ಅಧಿಕಾರದಲ್ಲಿ ಏಕರೂಪತೆ ಇಲ್ಲದ ಕಾರಣದಿಂದ ನಿರ್ಣಯಗಳೂ ವಿಭಿನ್ನವಾಗಿರುತ್ತವೆ. ಈ ಕಾರಣದಿಂದಾಗಿ ಗೊಂದಲ ಉಂಟಾಗುತ್ತಿದೆ. ಆದ್ದರಿಂದ ಅಧಿಕಾರದಲ್ಲಿ ಏಕರೂಪತೆ ಮತ್ತು ಸ್ಪಷ್ಟತೆ ತರುವ ನಿಟ್ಟಿನಲ್ಲಿ ಚರ್ಚಿಸಲಾಗುತ್ತಿದೆ. ಈವರೆಗೆ ನಡೆದಿರುವ ಚರ್ಚೆಗಳ ಸ್ಫೂರ್ತಿಯ ಆಧಾರದಲ್ಲಿ ಕರಡನ್ನು ಅಂತಿಮಗೊಳಿಸುವಂತೆ ಪ್ರತಿಪಾದಿಸಿದ್ದೇನೆ’ ಎಂದು ಸ್ಪೀಕರ್ ತಿಳಿಸಿದ್ದಾರೆ.</p>.<p>ಚರ್ಚೆ ಅಂತಿಮ ಹಂತದಲ್ಲಿದೆ. ಸಮಿತಿಯ ಮುಂದಿನ ಸಭೆಯ ವೇಳೆಗೆ ಸಂವಿಧಾನದ 10ನೇ ಪರಿಚ್ಛೇದದ ಅಡಿಯಲ್ಲಿ ಶಾಸನಸಭೆಗಳ ಪೀಠಾಧಿಕಾರಿಗಳ ಅಧಿಕಾರಕ್ಕೆ ಸಂಬಂಧಿಸಿದಂತೆ ತರಬೇಕಿರುವ ತಿದ್ದುಪಡಿಗಳ ಕರಡನ್ನು ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಶಾಸನ ಸಭೆಗಳ ಪೀಠಾಧಿಕಾರಿಗಳ ಅಧಿಕಾರದಲ್ಲಿ ಏಕರೂಪತೆ ಮತ್ತು ಸ್ಪಷ್ಟತೆ ತರುವುದಕ್ಕೆ ಸಂಬಂಧಿಸಿದಂತೆ ಸಂವಿಧಾನದ 10ನೇ ಪರಿಚ್ಛೇದದ ತಿದ್ದುಪಡಿಯ ಶಿಫಾರಸುಗಳ ಕರಡನ್ನು ಶೀಘ್ರದಲ್ಲಿ ಸಲ್ಲಿಸಲಾಗುವುದು ಎಂದು ಕರಡು ರಚನಾ ಸಮಿತಿ ಸದಸ್ಯರಾಗಿರುವ ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.</p>.<p>ವಿಧಾನಸಭೆಯ ಅಧ್ಯಕ್ಷರ ಸಮಾವೇಶದಲ್ಲಿ ರಾಜಸ್ತಾನ ವಿಧಾನಸಭೆಯ ಅಧ್ಯಕ್ಷ ಚಂದ್ರ ಪ್ರಕಾಶ್ ಜೋಶಿ ಅಧ್ಯಕ್ಷತೆಯ ಸಮಿತಿ ನೇಮಕ ಮಾಡಲಾಗಿತ್ತು. ವಿಶ್ವೇಶ್ವರ ಹೆಗಡೆ ಕಾಗೇರಿ, ಒಡಿಶಾ ಮತ್ತು ನಾಗಾಲ್ಯಾಂಡ್ ವಿಧಾನಸಭೆಗಳ ಅಧ್ಯಕ್ಷರೂ ಸಮಿತಿಯ ಸದಸ್ಯರಾಗಿದ್ದಾರೆ. ಸೋಮವಾರ ವರ್ಚ್ಯುಯಲ್ ಆಗಿ ಸಮಿತಿಯ ಸಭೆ ನಡೆದಿದೆ.</p>.<p>‘ಶಾಸನಸಭೆಗಳ ಪೀಠಾಧಿಕಾರಿಗಳ ಅಧಿಕಾರದಲ್ಲಿ ಏಕರೂಪತೆ ಇಲ್ಲದ ಕಾರಣದಿಂದ ನಿರ್ಣಯಗಳೂ ವಿಭಿನ್ನವಾಗಿರುತ್ತವೆ. ಈ ಕಾರಣದಿಂದಾಗಿ ಗೊಂದಲ ಉಂಟಾಗುತ್ತಿದೆ. ಆದ್ದರಿಂದ ಅಧಿಕಾರದಲ್ಲಿ ಏಕರೂಪತೆ ಮತ್ತು ಸ್ಪಷ್ಟತೆ ತರುವ ನಿಟ್ಟಿನಲ್ಲಿ ಚರ್ಚಿಸಲಾಗುತ್ತಿದೆ. ಈವರೆಗೆ ನಡೆದಿರುವ ಚರ್ಚೆಗಳ ಸ್ಫೂರ್ತಿಯ ಆಧಾರದಲ್ಲಿ ಕರಡನ್ನು ಅಂತಿಮಗೊಳಿಸುವಂತೆ ಪ್ರತಿಪಾದಿಸಿದ್ದೇನೆ’ ಎಂದು ಸ್ಪೀಕರ್ ತಿಳಿಸಿದ್ದಾರೆ.</p>.<p>ಚರ್ಚೆ ಅಂತಿಮ ಹಂತದಲ್ಲಿದೆ. ಸಮಿತಿಯ ಮುಂದಿನ ಸಭೆಯ ವೇಳೆಗೆ ಸಂವಿಧಾನದ 10ನೇ ಪರಿಚ್ಛೇದದ ಅಡಿಯಲ್ಲಿ ಶಾಸನಸಭೆಗಳ ಪೀಠಾಧಿಕಾರಿಗಳ ಅಧಿಕಾರಕ್ಕೆ ಸಂಬಂಧಿಸಿದಂತೆ ತರಬೇಕಿರುವ ತಿದ್ದುಪಡಿಗಳ ಕರಡನ್ನು ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>