ಹಳೇಹುಬ್ಬಳ್ಳಿ ಪೊಲೀಸರ ಕಸ್ಟಡಿಯಲ್ಲಿದ್ದ ಆರೀಫ್, ಅಲ್ಲಿದ್ದ ಸಿಬ್ಬಂದಿಗೆ ಟರ್ಪಂಟೈಲ್ ನೀಡುವಂತೆ ವಿನಂತಿಸಿದ್ದಾನೆ. ಗಾಯಕ್ಕೆ ಹಚ್ಚಲು ಕೇಳಿರಬಹುದು ಎಂದು ಸಿಬ್ಬಂದಿ ಬಾಟಲ್ ನೀಡಿದ್ದು, ಅದನ್ನು ತಕ್ಷಣವೇ ಕುಡಿದಿದ್ದಾನೆ. ಅಲ್ಲಿಯೇ ಇದ್ದ ಮತ್ತೊಬ್ಬ ಆರೋಪಿ ಮಹಾನಗರ ಪಾಲಿಕೆಯ ಎಐಎಂಐಎಂ ಸದಸ್ಯ ನಸೀರ್ ಅಹ್ಮದ್ ಹೊನ್ಯಾಳ ಅದನ್ನು ನೋಡಿ ಬಾಟಲಿ ಕಿತ್ತುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.