ಕಂಪನಿಯ ಆಡಳಿತವರ್ಗ ವೈಜ್ಞಾನಿಕ ಅಧ್ಯಯನ ನಡೆಸದೆ ಉತ್ಪಾದನಾ ಪ್ರಮಾಣವನ್ನು ಏಕಾಏಕಿ ಏಕಪಕ್ಷೀಯವಾಗಿ ಹೆಚ್ಚಿಸಿ, ಕೆಲಸದ ಹೊರೆಯನ್ನು ಹೆಚ್ಚಿಸಿತ್ತು. ಕಾರ್ಮಿಕರು ನೀರು ಕುಡಿಯಲು ಹೋಗದಂತೆ ಹಾಗೂ ಶೌಚಾಲಯಕ್ಕೆ ಹೋಗದಂತೆಯೂ ನಿರ್ಬಂಧಿಸಿತ್ತು. ಇದು ಯಾವ ಹಂತ ತಲುಪಿತ್ತು ಎಂದರೆ ಕಾರ್ಮಿಕರು ನೀರು ಕುಡಿಯಲು ಅಥವಾ ಶೌಚಾಲಯಕ್ಕೆ ಹೋದರೂ ಅವರು ಗೈರಾಗಿದ್ದಾರೆ ಎಂದು ಸಂಬಳ ಕಡಿತ, ಶಿಸ್ತು ಕ್ರಮದಂತಹ ಮನುಷ್ಯ ವಿರೋಧಿ ಕ್ರಮಗಳನ್ನು ಅನುಸರಿಸಲಾಗುತ್ತಿತ್ತು ಎಂದು ಸಂಘವು ಆರೋಪಿಸಿದೆ.