ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನುಕಂಪದ ನೌಕರಿ ನಿಯಮ ತಿದ್ದುಪಡಿಗೆ ಅಧಿಸೂಚನೆ: ಏನಿದೆ ಹೊಸ ನಿಯಮದಲ್ಲಿ?

Last Updated 10 ಏಪ್ರಿಲ್ 2021, 5:27 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರಿ ಹುದ್ದೆಯಲ್ಲಿದ್ದವರು ಮೃತಪಟ್ಟರೆ, ಅನುಕಂಪದ ಆಧಾರದಲ್ಲಿ ಅವಲಂಬಿತರಿಗೆ ಸರ್ಕಾರಿ ಹುದ್ದೆಗೆ ನೇಮಕಾತಿ ಮಾಡಿಕೊಳ್ಳುವ ಕುರಿತಂತೆ ಕರ್ನಾಟಕ ನಾಗರಿಕ ಸೇವಾ (ಅನುಕಂಪದ ಆಧಾರದ ಮೇಲೆ ನೇಮಕಾತಿ) ನಿಯಮಗಳಿಗೆ ತಿದ್ದುಪಡಿ ಮಾಡಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ತಿದ್ದುಪಡಿ ನಿಯಮದ ಪ್ರಕಾರ, ಸರ್ಕಾರಿ ನೌಕರ ಮೃತಪಟ್ಟರೆ ಆತನ ಜೊತೆ ವಾಸವಿದ್ದ ವಿಧವಾ ಪತ್ನಿ ಅನುಕಂಪದ ಆಧಾರದಲ್ಲಿ ಹುದ್ದೆ ಪಡೆಯಲು ಅರ್ಹರಾಗುತ್ತಾರೆ. ನೇಮಕಾತಿಗೆ ಆಕೆಗೆ ಅರ್ಹತೆ ಇಲ್ಲದಿದ್ದರೆ ಅಥವಾ ನೇಮಕಾತಿ ಬಯಸದೇ ಇದ್ದರೆ ಆಕೆ ಆಯ್ಕೆ ಮಾಡಿದ ಮಗ ಅಥವಾ ಮಗಳು ಹುದ್ದೆ ಪಡೆಯಲು ಅರ್ಹರಾಗುತ್ತಾರೆ.

ವಿವಾಹಿತ ಮಹಿಳಾ ನೌಕರರು ಮೃತಪಟ್ಟರೆ ಆಕೆಯ ವಿಧುರ ಪತಿಯು ಆಯ್ಕೆ ಮಾಡಿದ ಮಗ ಅಥವಾ ಮಗಳು ಅಥವಾ ಮೃತಳ ಅವಲಂಬಿತ ಮಗ, ಮಗಳು ಅರ್ಹರಿಲ್ಲದಿದ್ದರೆ ಅಥವಾ ನೇಮಕಾತಿ ಬಯಸದೇ ಇದ್ದರೆ, ವಿಧುರ ಪತಿಯನ್ನು ಹುದ್ದೆಗೆ ಪರಿಗಣಿಸಬಹುದು. ಪತಿ ಮೊದಲೇ ಮೃತಪಟ್ಟಿದ್ದರೆ, ಮಕ್ಕಳ ವಯಸ್ಸಿಗೆ ಅನುಗುಣವಾಗಿ ಹುದ್ದೆ ನೀಡಬೇಕು ಎಂದೂ ನಿಯಮ ತಿದ್ದುಪಡಿ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT