ಬೆಂಗಳೂರು: ಕೃಷಿಕ್ ಸರ್ವೋದಯ ಫೌಂಡೇಷನ್ ಐಎಎಸ್, ಕೆಎಎಸ್ ಹಾಗೂ ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲಿದೆ.
ಅಭ್ಯರ್ಥಿಗಳಿಗೆ ವಿಷಯ ಸಾಮಗ್ರಿ ಜೊತೆಗೆ ಹಾಸ್ಟೆಲ್ ವ್ಯವಸ್ಥೆಯೂ ಇರಲಿದೆ. ಪ್ರತಿಭಾವಂತರು ಹಾಗೂ ಆರ್ಥಿಕ ದುರ್ಬಲರಿಗೆ ಸಂಸ್ಥೆಯಿಂದ ದತ್ತಿ ವಿದ್ಯಾರ್ಥಿವೇತನ ನೀಡಲಾಗುವುದು.
ಜುಲೈ 1ರಿಂದ ಭೌತಿಕ ಹಾಗೂ ಆನ್ಲೈನ್ ಮೂಲಕ ತರಬೇತಿ ಪ್ರಾರಂಭಗೊಳ್ಳಲಿದೆ. ಆಸಕ್ತರು ಇದೇ 28ರೊಳಗೆ ಸಂಸ್ಥೆಯ ವೆಬ್ಸೈಟ್ www.krishiksarvodayafoundation.org/ ಅಥವಾ ವಾಟ್ಸ್ಆ್ಯಪ್ ಸಂಖ್ಯೆ 7625000990 ಮೂಲಕಹೆಸರು ನೋಂದಾಯಿಸಿಕೊಳ್ಳಬಹುದು.
ಐಬಿಪಿಎಸ್, ಆರ್ಆರ್ಬಿ ಪರೀಕ್ಷೆಯ ಆಕಾಂಕ್ಷಿಗಳು ಜೂ.26ರೊಳಗೆ www.ibps.in ವೆಬ್ಸೈಟ್ನಲ್ಲಿ ಅರ್ಜಿ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.
ವಿಳಾಸ:ಕೃಷಿಕ್ ಸರ್ವೋದಯ ಫೌಂಡೇಷನ್, ಹಳೆಯ ವಿಮಾನ ನಿಲ್ದಾಣ ರಸ್ತೆ, ಕೋಡಿಹಳ್ಳಿ, ಬೆಂಗಳೂರು–560008