'ಬ್ರಾಹ್ಮಣ ಅಭಿವೃದ್ದಿ ಮಂಡಳಿಯು ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣರ ಅಭಿವೃದ್ದಿಗಾಗಿ ಮೀಸಲಾಗಿರುವ ಸರ್ಕಾರಿ ಸಂಸ್ಥೆಯಾಗಿದೆ. ಬಡ, ಹಿಂದುಳಿದ ಬ್ರಾಹ್ಮಣರ ಏಳಿಗೆಗಾಗಿ ಯೋಜನೆಗಳನ್ನು ರೂಪಿಸುವುದು ಮತ್ತು ಜಾರಿ ಮಾಡುವುದಷ್ಟೇ ಬ್ರಾಹ್ಮಣ ಅಭಿವೃದ್ದಿ ಮಂಡಳಿ ಕೆಲಸವಾಗಿರುತ್ತದೆ. ಬಡ, ಹಿಂದುಳಿದ ಬ್ರಾಹ್ಮಣರ ಅಭಿವೃದ್ದಿಯ ನಿಟ್ಟಿನಲ್ಲಿ ಕೆಲಸ ಮಾಡದ ಮಂಡಳಿ ಅಧ್ಯಕ್ಷರು, ಸರ್ಕಾರಿ ದಾಖಲೆ, ಮುದ್ರೆ, ಲಾಂಛನ ಮತ್ತು ಕರ್ನಾಟಕ ಸರ್ಕಾರ ಎಂಬ ಹೆಸರನ್ನು ದುರುಪಯೋಗಪಡಿಸಿಕೊಂಡು ನಟ ಚೇತನ್ ವಿರುದ್ದ ದೂರು ನೀಡಿದ್ದಾರೆ’ ಎಂದೂ ಹೇಳಿದ್ದಾರೆ.