‘ದೇವರಾಜ ಅರಸು ರಸ್ತೆಯಲ್ಲಿರುವ ದರ್ಗಾ ಹಾಗೂ ಇರ್ವಿನ್ ರಸ್ತೆಯಲ್ಲಿರುವ ಮಸೀದಿಯನ್ನು ಒಡೆದು ಹಾಕ
ಬೇಕು ಎಂದು ಜಿಲ್ಲಾಧಿಕಾರಿಯವರಿಗೆ ಸಭೆಯಲ್ಲಿ ಧಮ್ಕಿ ಹಾಕಿದ್ದರು. ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಸಮ್ಮುಖದಲ್ಲೇ ಧಾರ್ಮಿಕ ಭಾವನೆಗಳನ್ನು ಕೆರಳಿಸಿ, ಸಮುದಾಯಗಳ ನಡುವೆ ಕಿಚ್ಚು ಹಚ್ಚಿಸುವಂತಹ ಹೇಳಿಕೆ ನೀಡಿರುವುದನ್ನು ಗಂಭೀರವಾಗಿ ಪರಿಗಣಿಸಬೇಕು’ ಎಂದು ಕಾಂಗ್ರೆಸ್ ಜಿಲ್ಲಾ ಸಮಿತಿ ಅಧ್ಯಕ್ಷ ಬಿ.ಜೆ.ವಿಜಯಕುಮಾರ್ ಆಗ್ರಹಿಸಿದರು.