2017ರ ಜನವರಿಯಿಂದ 2019ರ ಜನವರಿವರೆಗೆ ಆರೋಗ್ಯ ಕವಚ ಯೋಜನೆ ಮೇಲುಸ್ತುವಾರಿಗೆ ಪ್ರತ್ಯೇಕ ಉಪ ನಿರ್ದೇಶಕರನ್ನು ನೇಮಿಸಲಾಗಿತ್ತು. ಈ ಅವಧಿಯಲ್ಲಿ ಆಂಬುಲೆನ್ಸ್ಗಳ ಸಂಚಾರ ಮತ್ತು ಕಾರ್ಯನಿರ್ವಹಣೆ ಮೇಲೆ ವ್ಯಾಪಕ ನಿಗಾ ಇರಿಸಲಾಗಿತ್ತು. ಜಿವಿಕೆ ಕಂಪನಿ ಹೆಚ್ಚುವರಿಯಾಗಿ ಪಡೆದಿದ್ದ ₹ 135 ಕೋಟಿಯನ್ನು ರಾಜ್ಯ ಸರ್ಕಾರ ವಸೂಲಿ ಮಾಡಿತ್ತು. ಆದರೆ, 2019ರ ಜನವರಿಯಿಂದ ಉಪ ನಿರ್ದೇಶಕರ ಹುದ್ದೆಗೆ ಕಿರಿಯ ಅಧಿಕಾರಿಯೊಬ್ಬರನ್ನು ನೇಮಿಸಿದ ಆಯುಕ್ತರು, ವ್ಯಾಪಕ ಭ್ರಷ್ಟಾಚಾರಕ್ಕೆ ಅವಕಾಶ ಕಲ್ಪಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.