ರಾಜ್ಯಪಾಲರಿಗೆ ಸಲ್ಲಿಸಿರುವ ದೂರಿನಲ್ಲಿ ರಮೇಶ ಜಾರಕಿಹೊಳಿ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ನಿರ್ದೇಶನ ನೀಡುವಂತೆ ಕೋರಿದ್ದಾರೆ. ಲೋಕಾಯುಕ್ತರಿಗೆ ನಿಗದಿತ ನಮೂನೆಯಲ್ಲಿ ದೂರು ಸಲ್ಲಿಸಿರುವ ಗೀತಾ, ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿ ವಾಹಿನಿಗಳು ಪ್ರಸಾರ ಮಾಡಿರುವ ವಿಡಿಯೊ ದೃಶ್ಯಗಳ ತುಣುಕುಗಳುಳ್ಳ ಸಿ.ಡಿಯನ್ನೂ ಸಲ್ಲಿಸಿದ್ದಾರೆ. ಮಾಜಿ ಸಚಿವರ ವಿರುದ್ಧ ತನಿಖೆ ನಡೆಸುವಂತೆ ಲೋಕಾಯುಕ್ತರಿಗೆ ಮನವಿ ಮಾಡಿದ್ದಾರೆ.