ಕಠಿಣ ನಿರ್ಬಂಧಗಳು ಮುಂದುವರಿಯುವ ಜಿಲ್ಲೆಗಳ (ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಚಿಕ್ಕೋಡಿ (ಶೈಕ್ಷಣಿಕ ಜಿಲ್ಲೆ), ಮಂಡ್ಯ ಮತ್ತು ಕೊಡಗು) ಶಿಕ್ಷಕರು ತಮ್ಮ ಮನೆಗಳಿಂದಲೇ ಕಾರ್ಯನಿರ್ವಹಿಸಬೇಕು. ಈ ಜಿಲ್ಲೆಗಳ ಶಿಕ್ಷಕರು ಕಠಿಣ ನಿರ್ಬಂಧಗಳು ಭಾಗಶಃ ತೆರವುಗೊಳಿಸಿದ ತಕ್ಷಣ ಶಾಲೆಗಳಿಗೆ ತೆರಳಿ ಮಕ್ಕಳ ಕಲಿಕಾ ಪೂರ್ವ ತಯಾರಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದೂ ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿದೆ.