<p><strong>ಬೆಂಗಳೂರು:</strong> ರಾಜ್ಯದಲ್ಲಿ ಲಾಕ್ಡೌನ್ನ ಕಠಿಣ ನಿರ್ಬಂಧಗಳು ಮುಂದುವರಿಯಲಿರುವ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಎಲ್ಲ ಜಿಲ್ಲೆಗಳ ಶಿಕ್ಷಕರು ಮಂಗಳವಾರದಿಂದ (ಜೂನ್ 15) ಶಾಲೆಗಳಿಗೆ ತೆರಳಿ, ಪ್ರಸ್ತುತ ಸಾಲಿನ ಶೈಕ್ಷಣಿಕ ಪೂರ್ವ ತಯಾರಿ ಕಾರ್ಯಗಳಲ್ಲಿ (ವಿದ್ಯಾರ್ಥಿಗಳ ದಾಖಲಾತಿ) ಕಾರ್ಯಪ್ರವೃತ್ತರಾಗಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಪರಿಷ್ಕೃತ ಸುತ್ತೋಲೆ ಹೊರಡಿಸಿದ್ದಾರೆ.</p>.<p>ಕಠಿಣ ನಿರ್ಬಂಧಗಳು ಮುಂದುವರಿಯುವ ಜಿಲ್ಲೆಗಳ (ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಚಿಕ್ಕೋಡಿ (ಶೈಕ್ಷಣಿಕ ಜಿಲ್ಲೆ), ಮಂಡ್ಯ ಮತ್ತು ಕೊಡಗು) ಶಿಕ್ಷಕರು ತಮ್ಮ ಮನೆಗಳಿಂದಲೇ ಕಾರ್ಯನಿರ್ವಹಿಸಬೇಕು. ಈ ಜಿಲ್ಲೆಗಳ ಶಿಕ್ಷಕರು ಕಠಿಣ ನಿರ್ಬಂಧಗಳು ಭಾಗಶಃ ತೆರವುಗೊಳಿಸಿದ ತಕ್ಷಣ ಶಾಲೆಗಳಿಗೆ ತೆರಳಿ ಮಕ್ಕಳ ಕಲಿಕಾ ಪೂರ್ವ ತಯಾರಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದೂ ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿದೆ.</p>.<p>ಪ್ರಸಕ್ತ ಸಾಲಿನ ವಿದ್ಯಾರ್ಥಿಗಳ ದಾಖಲಾತಿ ಜೂನ್ 15ರಿಂದ ಆರಂಭವಾಗಲಿದ್ದು, ಜುಲೈ 1ರಿಂದ ಶೈಕ್ಷಣಿಕ ತರಗತಿಗಳು ಆರಂಭವಾಗಲಿದೆ ಎಂದು ಈಗಾಗಲೇ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಸೂಚನೆ ಹೊರಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದಲ್ಲಿ ಲಾಕ್ಡೌನ್ನ ಕಠಿಣ ನಿರ್ಬಂಧಗಳು ಮುಂದುವರಿಯಲಿರುವ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಎಲ್ಲ ಜಿಲ್ಲೆಗಳ ಶಿಕ್ಷಕರು ಮಂಗಳವಾರದಿಂದ (ಜೂನ್ 15) ಶಾಲೆಗಳಿಗೆ ತೆರಳಿ, ಪ್ರಸ್ತುತ ಸಾಲಿನ ಶೈಕ್ಷಣಿಕ ಪೂರ್ವ ತಯಾರಿ ಕಾರ್ಯಗಳಲ್ಲಿ (ವಿದ್ಯಾರ್ಥಿಗಳ ದಾಖಲಾತಿ) ಕಾರ್ಯಪ್ರವೃತ್ತರಾಗಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಪರಿಷ್ಕೃತ ಸುತ್ತೋಲೆ ಹೊರಡಿಸಿದ್ದಾರೆ.</p>.<p>ಕಠಿಣ ನಿರ್ಬಂಧಗಳು ಮುಂದುವರಿಯುವ ಜಿಲ್ಲೆಗಳ (ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಚಿಕ್ಕೋಡಿ (ಶೈಕ್ಷಣಿಕ ಜಿಲ್ಲೆ), ಮಂಡ್ಯ ಮತ್ತು ಕೊಡಗು) ಶಿಕ್ಷಕರು ತಮ್ಮ ಮನೆಗಳಿಂದಲೇ ಕಾರ್ಯನಿರ್ವಹಿಸಬೇಕು. ಈ ಜಿಲ್ಲೆಗಳ ಶಿಕ್ಷಕರು ಕಠಿಣ ನಿರ್ಬಂಧಗಳು ಭಾಗಶಃ ತೆರವುಗೊಳಿಸಿದ ತಕ್ಷಣ ಶಾಲೆಗಳಿಗೆ ತೆರಳಿ ಮಕ್ಕಳ ಕಲಿಕಾ ಪೂರ್ವ ತಯಾರಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದೂ ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿದೆ.</p>.<p>ಪ್ರಸಕ್ತ ಸಾಲಿನ ವಿದ್ಯಾರ್ಥಿಗಳ ದಾಖಲಾತಿ ಜೂನ್ 15ರಿಂದ ಆರಂಭವಾಗಲಿದ್ದು, ಜುಲೈ 1ರಿಂದ ಶೈಕ್ಷಣಿಕ ತರಗತಿಗಳು ಆರಂಭವಾಗಲಿದೆ ಎಂದು ಈಗಾಗಲೇ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಸೂಚನೆ ಹೊರಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>