<p><strong>ಬೆಂಗಳೂರು: </strong>ಬಿಬಿಎಂಪಿಯ 198 ವಾರ್ಡ್ಗಳ ಚುನಾವಣೆ ಘೋಷಣೆ ಮಾಡುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಆದೇಶಿಸಿದೆ. ಮೀಸಲಾತಿಯ ಅಂತಿಮ ಅಧಿಸೂಚನೆ ಪ್ರಕಟವಾದ ನಂತರ ಆರು ವಾರಗಳಲ್ಲಿ ಚುನಾವಣೆ ವೇಳಾಪಟ್ಟಿ ಪ್ರಕಟಿಸುವಂತೆ ತಿಳಿಸಿದೆ.</p>.<p>ಈ ಹಿಂದಿನ ಅವಧಿ ಪಾಲಿಕೆ ಸದಸ್ಯರಾಗಿದ್ದ ಎಂ. ಶಿವರಾಜ್ ಮತ್ತು ಅಬ್ದುಲ್ ವಾಜೀದ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಈ ಆದೇಶ ನೀಡಿದೆ.</p>.<p>ಕೆಎಂಸಿ ಕಾಯ್ದೆಯ ತಿದ್ದುಪಡಿ ಮಾನ್ಯವಾಗಿದ್ದರೂ, ಅಕ್ಟೋಬರ್ 3ರ ನಂತರ ಅವಧಿ ಮುಗಿದ ಸ್ಥಳೀಯ ಸಂಸ್ಥೆಗಳಿಗೆ ಮಾತ್ರ ಇದು ಅನ್ವಯವಾಗಲಿದೆ ಎಂದು ಪೀಠ ಹೇಳಿದೆ. ಬಿಬಿಎಂಪಿ ಅವಧಿ ಸೆಪ್ಟೆಂಬರ್ನಲ್ಲಿ ಮುಗಿದಿರುವ ಕಾರಣ ಪಾಲಿಕೆ ಚುನಾವಣೆಗೆ ಅನ್ವಯವಾಗುವುದಿಲ್ಲ.</p>.<p>ಸದ್ಯ 198 ವಾರ್ಡ್ಗಳಿದ್ದು, ಅದನ್ನು 243ಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರ ಕೆಎಂಸಿ ಕಾಯ್ದೆಗೆ ತಿದ್ದುಪಡಿ ತಂದಿತ್ತು. ಈ ತಿದ್ದುಪಡಿ ಬಿಬಿಎಂಪಿ ಈ ಬಾರಿಯ ಚುನಾವಣೆಗೆ ಅನ್ವಯವಾಗಿದ್ದರೆ ಚುನಾವಣೆ ವಿಳಂಬವಾಗುವ ಸಾಧ್ಯತೆ ಇತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬಿಬಿಎಂಪಿಯ 198 ವಾರ್ಡ್ಗಳ ಚುನಾವಣೆ ಘೋಷಣೆ ಮಾಡುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಆದೇಶಿಸಿದೆ. ಮೀಸಲಾತಿಯ ಅಂತಿಮ ಅಧಿಸೂಚನೆ ಪ್ರಕಟವಾದ ನಂತರ ಆರು ವಾರಗಳಲ್ಲಿ ಚುನಾವಣೆ ವೇಳಾಪಟ್ಟಿ ಪ್ರಕಟಿಸುವಂತೆ ತಿಳಿಸಿದೆ.</p>.<p>ಈ ಹಿಂದಿನ ಅವಧಿ ಪಾಲಿಕೆ ಸದಸ್ಯರಾಗಿದ್ದ ಎಂ. ಶಿವರಾಜ್ ಮತ್ತು ಅಬ್ದುಲ್ ವಾಜೀದ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಈ ಆದೇಶ ನೀಡಿದೆ.</p>.<p>ಕೆಎಂಸಿ ಕಾಯ್ದೆಯ ತಿದ್ದುಪಡಿ ಮಾನ್ಯವಾಗಿದ್ದರೂ, ಅಕ್ಟೋಬರ್ 3ರ ನಂತರ ಅವಧಿ ಮುಗಿದ ಸ್ಥಳೀಯ ಸಂಸ್ಥೆಗಳಿಗೆ ಮಾತ್ರ ಇದು ಅನ್ವಯವಾಗಲಿದೆ ಎಂದು ಪೀಠ ಹೇಳಿದೆ. ಬಿಬಿಎಂಪಿ ಅವಧಿ ಸೆಪ್ಟೆಂಬರ್ನಲ್ಲಿ ಮುಗಿದಿರುವ ಕಾರಣ ಪಾಲಿಕೆ ಚುನಾವಣೆಗೆ ಅನ್ವಯವಾಗುವುದಿಲ್ಲ.</p>.<p>ಸದ್ಯ 198 ವಾರ್ಡ್ಗಳಿದ್ದು, ಅದನ್ನು 243ಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರ ಕೆಎಂಸಿ ಕಾಯ್ದೆಗೆ ತಿದ್ದುಪಡಿ ತಂದಿತ್ತು. ಈ ತಿದ್ದುಪಡಿ ಬಿಬಿಎಂಪಿ ಈ ಬಾರಿಯ ಚುನಾವಣೆಗೆ ಅನ್ವಯವಾಗಿದ್ದರೆ ಚುನಾವಣೆ ವಿಳಂಬವಾಗುವ ಸಾಧ್ಯತೆ ಇತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>