ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಂಪುಗಳ ನಡುವೆ ಮಾರಾಮಾರಿ; 9 ಮಂದಿಗೆ ಗಾಯ

Last Updated 22 ಮೇ 2022, 19:00 IST
ಅಕ್ಷರ ಗಾತ್ರ

ಕಾರಟಗಿ (ಕೊಪ್ಪಳ ಜಿಲ್ಲೆ): ತಾಲ್ಲೂಕಿನ ನಂದಿಹಳ್ಳಿ ಗ್ರಾಮದಲ್ಲಿ ಶನಿವಾರ ರಾತ್ರಿ ಅಕ್ರಮ ಮರಳು ಮಾರಾಟ ಮತ್ತು ಹಣ ಹಂಚಿಕೆ ವಿಷಯದಲ್ಲಿ ಪರಿಶಿಷ್ಟ ಜಾತಿ ಮತ್ತು ನಾಯಕ ಸಮುದಾಯಗಳ ನಡುವೆ ಮಾರಾಮಾರಿಯಾಗಿದ್ದು, ಪರಿಶಿಷ್ಟ ಜಾತಿಯ 9 ಮಂದಿ ಗಾಯಗೊಂಡಿದ್ದಾರೆ. ಎರಡೂ ಗುಂಪಿನವರು ಬಡಿಗೆ, ಕಲ್ಲುಗಳಿಂದ ಪರಸ್ಪರ ಹೊಡೆದಾಡಿಕೊಂಡಿದ್ದು, ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

‘ಪರಿಶಿಷ್ಟ ಜಾತಿಯ ದೇವಣ್ಣ ಹಾವಣ್ಣ ಮಾದಿಗ ಎಂಬುವರು 69 ಜನರ ವಿರುದ್ಧ ಜಾತಿ ನಿಂದನೆ ದೂರು ನೀಡಿದ್ದಾರೆ. ಲಿಂಗಾಯತ, ಉಪ್ಪಾರ ಜನಾಂಗದ ತಲಾ ಒಬ್ಬರು ಮತ್ತು 67 ನಾಯಕ ಸಮುದಾಯದವರ ವಿರುದ್ಧ ಪ್ರಕರಣ ದಾಖಲಾಗಿದೆ. 16 ಆರೋಪಿಗಳನ್ನು ಬಂಧಿಸಲಾಗಿದೆ. ಗ್ರಾಮದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ನಿಗಾ ವಹಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ಇಡೀ ದಿನ ಕಾರಟಗಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ ಪರಿಶಿಷ್ಟ ಜಾತಿ ಸಮುದಾಯದವರು,‘ಪ್ರಕರಣದ ಎಲ್ಲಾ 69 ಜನರನ್ನೂ ಬಂಧಿಸಬೇಕು. ನಮಗೆ ಅನ್ಯಾಯವಾಗಿದೆ. ನಮ್ಮ ವಿರುದ್ಧ ದೂರು ಸ್ವೀಕರಿಸಬಾರದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT