‘ನಿಧನರಾಗಿದ್ದಾರೆ ಎಂದು ಸುಳ್ಳು ಸುದ್ದಿ ಹರಡಲಾಗಿದ್ದು, ಇದರಿಂದ ಬೇಸರವಾಗಿದೆ’ ಎಂದು ಕುಟುಂಬಸ್ಥರು ನೀಡಿದ ಸ್ಪಷ್ಟನೆಯನ್ನು ‘ಪ್ರಜಾವಾಣಿ’ ಅಂತರ್ಜಾಲ ತಾಣದಲ್ಲಿ ಮೊದಲು ಪ್ರಕಟಿಸಿತು. ರಾಯಚೂರು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ಕೂಡಾ ಈ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯೆ ನೀಡಿದರು. ‘ಮಣಿಪಾಲ್ ಆಸ್ಪತ್ರೆಯ ವೈದ್ಯರೊಂದಿಗೆ ಮಾತನಾಡಿದ್ದು, ಗಂಭೀರ ಸ್ಥಿತಿಯಲ್ಲಿರುವ ಅಶೋಕ ಗಸ್ತಿ ಅವರಿಗೆ ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿಸಿದ್ದಾರೆ’ ಎನ್ನುವ ಮಾಹಿತಿಯನ್ನು ಕೂಡಾ ಅಂತರ್ಜಾಲ ತಾಣದಲ್ಲಿ ಹಾಕಲಾಗಿತ್ತು.