‘ಸಚಿವರು ಜಿಲ್ಲೆಗೆ ಇದುವರೆಗೆ ಯಾವುದೇ ಕೊಡುಗೆ ನೀಡಿಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಜಿಲ್ಲೆಗೆ ₹ 22,365 ಕೋಟಿ ವಿಶೇಷ ಅನುದಾನ ನೀಡಿ ಅಭಿವೃದ್ಧಿಗೆ ಕಾರಣರಾಗಿದ್ದಾರೆ. ಮೈಸೂರು ಮಹಾನಗರಕ್ಕೇ ₹ 3,800 ಕೋಟಿ ನೀಡಿದ್ದಾರೆ. ಜಿಲ್ಲೆಗೆ ಸೋಮಶೇಖರ್ ಇದುವರೆಗೆ ನೀಡಿರುವ ಕೊಡುಗೆ ಏನು ಎಂದು ಶ್ವೇತಪತ್ರ ಹೊರಡಿಸಲಿ’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.