ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವ ಎಸ್.ಟಿ.ಸೋಮಶೇಖರ್‌ ಆಟಕ್ಕುಂಟು ಲೆಕ್ಕಕ್ಕಿಲ್ಲ: ಕಾಂಗ್ರೆಸ್

Last Updated 22 ಜನವರಿ 2022, 9:29 IST
ಅಕ್ಷರ ಗಾತ್ರ

ಮೈಸೂರು: ‘ಸಚಿವ ಎಸ್.ಟಿ.ಸೋಮಶೇಖರ್‌ ಅವರು ಕೇವಲ ಬಾವುಟ ಹಾರಿಸಲು ಮೈಸೂರು ಜಿಲ್ಲೆಗೆ ಬಂದು ಹೋಗುವ ಮಂತ್ರಿ ಆಗಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಅನುದಾನ ಬಿಡುಗಡೆ ಮಾಡಿ, ಶಂಕುಸ್ಥಾಪನೆ ನೆರವೇರಿಸಿದ್ದ ಕಾಮಗಾರಿಗಳನ್ನು ಉದ್ಘಾಟಿಸುತ್ತಿದ್ದಾರೆ’ ಎಂದು ಹುಣಸೂರು ಶಾಸಕ ಕಾಂಗ್ರೆಸ್‌ನ ಎಚ್‌.ಪಿ.ಮಂಜುನಾಥ್‌ ಹರಿಹಾಯ್ದರು.

‘ಸಚಿವರು ಜಿಲ್ಲೆಗೆ ಇದುವರೆಗೆ ಯಾವುದೇ ಕೊಡುಗೆ ನೀಡಿಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಜಿಲ್ಲೆಗೆ ₹ 22,365 ಕೋಟಿ ವಿಶೇಷ ಅನುದಾನ ನೀಡಿ ಅಭಿವೃದ್ಧಿಗೆ ಕಾರಣರಾಗಿದ್ದಾರೆ. ಮೈಸೂರು ಮಹಾನಗರಕ್ಕೇ ₹ 3,800 ಕೋಟಿ ನೀಡಿದ್ದಾರೆ. ಜಿಲ್ಲೆಗೆ ಸೋಮಶೇಖರ್‌ ಇದುವರೆಗೆ ನೀಡಿರುವ ಕೊಡುಗೆ ಏನು ಎಂದು ಶ್ವೇತಪತ್ರ ಹೊರಡಿಸಲಿ‌‌’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.

‘ಬಿಜೆಪಿ ಶಾಸಕರು ಆಟಕ್ಕುಂಟು ಲೆಕ್ಕಕ್ಕಿಲ್ಲದಂತಾಗಿದ್ದಾರೆ. ಅವರನ್ನು ವಿಧಾನಸೌಧದಲ್ಲಿ ಕೈ ಎತ್ತುವುದಕ್ಕೆ ಮಾತ್ರ ಇಟ್ಟುಕೊಂಡಿದ್ದಾರೆ. ನಂಜನಗೂಡು ಬಿಜೆಪಿ ಶಾಸಕ ಹರ್ಷವರ್ಧನ್‌ ಅವರನ್ನು ಪದೇಪದೇ ಕಡೆಗಣಿಸುತ್ತಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT