ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೀಘ್ರದಲ್ಲೇ ಕಾಂಗ್ರೆಸ್‌ನ 10 ಶಾಸಕರು ಬಿಜೆಪಿಗೆ: ಮುನಿರತ್ನ

Last Updated 15 ಡಿಸೆಂಬರ್ 2022, 12:44 IST
ಅಕ್ಷರ ಗಾತ್ರ

ಕೋಲಾರ: ‘ಕಾಂಗ್ರೆಸ್‌ ಪಕ್ಷದ 20 ಶಾಸಕರು ಬಿಜೆಪಿಗೆ ಬರಲು ಸಿದ್ಧರಿದ್ದಾರೆ. ಅವರಲ್ಲಿ 10 ಜನರನ್ನು ಮಾತ್ರ ಆಯ್ಕೆ ಮಾಡಿಕೊಂಡಿದ್ದೇವೆ. ಸದ್ಯದಲ್ಲಿಯೇ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ತಿಳಿಸಿದರು.

ಗುರುವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ಕಾಂಗ್ರೆಸ್‌ನ ಇಬ್ಬರು ಮೂವರು ನಾಯಕರು ಒಟ್ಟಾಗಿ ಕೆಲಸ ಮಾಡಿದರೂ 2023ಕ್ಕೆ ಅಧಿಕಾರಕ್ಕೆ ಬರಲು ಅವರಿಂದ ಸಾಧ್ಯವಾಗುವುದಿಲ್ಲ. ಮುಂದೆಯೂ ಬಿಜೆಪಿಯವರೇ ಮುಖ್ಯಮಂತ್ರಿ ಆಗಲಿದ್ದಾರೆ’ ಎಂದರು.

ಕಂದಾಯ ಸಚಿವ ಆರ್‌.ಅಶೋಕ ಪ್ರತಿಕ್ರಿಯಿಸಿ, ‘ಕಾಂಗ್ರೆಸ್‌–ಜೆಡಿಎಸ್‌ ಸಮ್ಮಿಶ್ರ ಸರ್ಕಾರ ಇದ್ದಾಗಲೇ 17 ಮಂದಿ ಶಾಸಕರು ಬಿಜೆಪಿ ಕಡೆ ಬಂದರು. ಅವರನ್ನು ತಡೆಯುವ ಯೋಗ್ಯತೆ ಇರಲಿಲ್ಲ. ಕಾಂಗ್ರೆಸ್‌ನಿಂದಲೇ ಹೊಸದಾಗಿ 10 ಶಾಸಕರು ಬಿಜೆಪಿಗೆ ಬರಲಿದ್ದಾರೆ. ಈ ಹಿಂದೆ ಬಿಜೆಪಿ ಸೇರ್ಪಡೆಯಾದವರೇ ತಮ್ಮ ಹಳೆ ಸ್ನೇಹಿತರನ್ನು ಕರೆತರಲಿದ್ದಾರೆ’ ಎಂದರು.

ರಸ್ತೆ ಹದಗೆಟ್ಟಿದ್ದರೆ ಕೆಲಸ ಮಾಡುವ ಶಾಸಕನನ್ನು ಆಯ್ಕೆ ಮಾಡಬೇಕಿತ್ತು:
‘ರಸ್ತೆಗಳು ಹದಗೆಟ್ಟಿವೆ ಎಂದು ಈಗ ಹೇಳಿದರೆ ಹೇಗೆ? ಮತ ಚಲಾಯಿಸುವಾಗ ಕೆಲಸ ಮಾಡುವಂಥ ಶಾಸಕರನ್ನು ಆಯ್ಕೆ ಮಾಡಬೇಕಿತ್ತು. ಕೆಲಸ ಮಾಡದ ಶಾಸಕರನ್ನು ಆಯ್ಕೆ ಮಾಡಿದರೆ ಹಳ್ಳವೂ ಬೀಳುತ್ತೆ, ಗುಂಡಿಯೂ ಬೀಳುತ್ತೆ. ಮಳೆ ಬಂದರೆ ಇನ್ನೂ ಹಾಳಾಗುತ್ತವೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಹೇಳಿದರು.

ರಸ್ತೆ ಹದಗೆಟ್ಟಿರುವುದನ್ನು ಖಂಡಿಸಿ ಪ್ರಗತಿಪರ ಸಂಘಟನೆಗಳು ಡಿ.16ರಂದು ಕೋಲಾರ ಬಂದ್‌ಗೆ ಕರೆ ನೀಡಿರುವ ಬಗ್ಗೆ ಗುರುವಾರ ಅವರು ಪ್ರತಿಕ್ರಿಯಿಸಿದರು.

‘ಸ್ಥಳೀಯ ಶಾಸಕರಿಗೆ ಕೆಲಸ ಮಾಡುವ ಇಚ್ಛೆ ಇರಬೇಕು. ಕೆಲಸ ಮಾಡುವ ಬದಲು ರಾಜಕೀಯ ಮಾಡಿದರೆ ಹೇಗೆ’ ಎಂದು ಪ್ರಶ್ನಿಸಿದರು.

‘ಇನ್ನುಮುಂದಾದರೂ ಜನರು ಕೆಲಸ ಮಾಡುವ ವ್ಯಕ್ತಿಗೆ ಮತ ನೀಡಬೇಕು. ಬಿಜೆಪಿಗೆ ವೋಟು ನೀಡಿದರೆ ರಸ್ತೆ ಅಭಿವೃದ್ಧಿ ಆಗಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT