‘ಸೋಂಕಿತರು, ಸೋಂಕಿನಿಂದ ಮೃತಪಟ್ಟಿದ್ದರೆ ಹೆಸರು, ವಯಸ್ಸು, ಅಂಥವರ ಮನೆಯಲ್ಲಿ ದುಡಿಯುವ ವ್ಯಕ್ತಿಗಳಿದ್ದಾರೆಯೇ, ಯಾರಾದರೂ ಉದ್ಯೋಗ ಕಳೆದುಕೊಂಡಿದ್ದರೆ ಅವರ ಹೆಸರು, ವಯಸ್ಸು, ಆ ಕುಟುಂಬಕ್ಕೆ ಅಗತ್ಯವಿರುವ ನೆರವು (ದಿನಸಿ, ಉದ್ಯೋಗ, ಶಿಕ್ಷಣ, ಆರ್ಥಿಕ ನೆರವು) ಏನು ಎಂಬ ಮಾಹಿತಿ ಸಂಗ್ರಹಿಸಿ ಅದನ್ನು ಪಕ್ಷದ ಕಾರ್ಯಕರ್ತರು ಕೆಪಿಸಿಸಿಗೆ ಕಳುಹಿಸಿಕೊಡಬೇಕು. ನಂತರ ಅದನ್ನು ಎಐಸಿಸಿಗೆ ರವಾನಿಸಲಾಗುವುದು’ ಎಂದರು.