ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒತ್ತುವರಿ ಜಮೀನಲ್ಲಿ ಅರಮನೆ ನಿರ್ಮಿಸಿಕೊಂಡಿರುವ ಆನಂದ್‌ ಸಿಂಗ್‌: ಕಾಂಗ್ರೆಸ್

Last Updated 31 ಆಗಸ್ಟ್ 2022, 9:36 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರಿ ಭೂಮಿ ಒತ್ತುವರಿ ಮಾಡಿ ಮನೆಯಲ್ಲ, ಅರಮನೆಯನ್ನೇ ನಿರ್ಮಿಸಿಕೊಂಡಿರುವ ಸಚಿವ ಆನಂದ್‌ ಸಿಂಗ್‌ ವಿರುದ್ಧ ಕಾನೂನು ಕೆಲಸ ಮಾಡುತ್ತಿಲ್ಲ ಏಕೆ? ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

ಆನಂದ್‌ ಸಿಂಗ್‌ ಅವರ ಮನೆಯ ಚಿತ್ರವನ್ನು ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ಇದು ಮನೆಯಲ್ಲ, ಅರಮನೆಯಂತಿದೆ ಎಂದು ಹೇಳಿದೆ.

ಸರ್ಕಾರಿ ಜಮೀನು ಒತ್ತುವರಿ ಕುರಿತಾಗಿ ಕೂಡಲೇ ತನಿಖೆ ನಡೆಸಿ ಆನಂದ್‌ ಸಿಂಗ್‌ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕಾಂಗ್ರೆಸ್‌ ಒತ್ತಾಯಿಸಿದೆ.

'ಕೂಡಲೇ ಸರ್ವೆ ನಡೆಸಿ, ಒತ್ತುವರಿ ತೆರವುಗೊಳಿಸಿ. ಈ ಕುರಿತು ಧ್ವನಿ ಎತ್ತಿದ ವ್ಯಕ್ತಿಗೆ ರಕ್ಷಣೆ ನೀಡಿ. ಅಕ್ರಮ ನಡೆಸಿದ ಸಚಿವರನ್ನು ವಜಾಗೊಳಿಸಿ. ನಿಮ್ಮ 'ಪಾರದರ್ಶಕ' ಆಡಳಿತವನ್ನು ತೋರಿಸಿ' ಎಂದು ಸಿಎಂ ಬೊಮ್ಮಾಯಿ ಅವರಿಗೆ ಸವಾಲು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT