‘ಕೋವಿಡ್ ಲಸಿಕೆ ರಫ್ತು ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ದೇಶವಾಸಿಗಳಿಗೆ ಸಾವಿನ ಭಾಗ್ಯ ನೀಡಿದ್ದರು. ದೇಶದಲ್ಲಿ ಇದುವರೆಗೆ ಕೇವಲ ಶೇ 14ರಷ್ಟು ಜನರು 2ನೇ ಡೋಸ್ ಲಸಿಕೆ ಪಡೆದಿದ್ದಾರೆ. ಕೇವಲ 20 ಕೋಟಿ ಜನರು ಮೊದಲ ಡೋಸ್ ಪಡೆದಿದ್ದಾರೆ. 3ನೇ ಅಲೆಯ ಭೀತಿ ಕಾಡುತ್ತಿದೆ. ಹೀಗಿರುವಾಗ ಮತ್ತೊಮ್ಮೆ ಲಸಿಕೆ ಉದ್ಯಮಕ್ಕೆ ಮುಂದಾಗಿ ದೇಶವಾಸಿಗಳನ್ನು ಕಡೆಗಣಿಸುತ್ತಿದೆ ಬಿಜೆಪಿ ಸರ್ಕಾರ’ ಎಂದು ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿದೆ.