‘ಬಿಬಿಎಂಪಿ, ಬಿಡಿಎಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ನೀರಾವರಿ ಇಲಾಖೆ, ನೇಮಕಾತಿಯಲ್ಲೂ ಭ್ರಷ್ಟಾಚಾರ, ಗುತ್ತಿಗೆಯಲ್ಲಿ ಶೇ 40ರಷ್ಟು ಕಮಿಷನ್ ಆರೋಪವಿದೆ. ಭ್ರಷ್ಟಾಚಾರ ನಿಯಂತ್ರಣಕ್ಕೆ ಆರು ತಿಂಗಳಲ್ಲಿ ಕೈಗೊಂಡ ಕ್ರಮಗಳೇನು? ಜನತಾ ದರ್ಶನ ಕಾರ್ಯಕ್ರಮ ಏಕೆ ಮಾಡಿಲ್ಲ? ಉಪಯೋಗವಿಲ್ಲದ ದೆಹಲಿ ದರ್ಶನಕ್ಕೆ ಹೋಗುವ ನಿಮಗೆ ಜನತಾ ದರ್ಶನಕ್ಕೆ ಸಮಯವಿಲ್ಲವೆ?’ ಎಂದು ಕಾಂಗ್ರೆಸ್ ಕೇಳಿದೆ.