<p><strong>ರಾಯಚೂರು</strong>: ‘ಕಾಂಗ್ರೆಸ್ ಪಕ್ಷವು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಗೆದ್ದಿರುವ ಸ್ಥಾನಗಳನ್ನಾದರೂ ಉಳಿಸಿಕೊಳ್ಳಲಿ. ಇದು ನನ್ನ ನೇರವಾದ ಸವಾಲು‘ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.</p>.<p>ತಾಲ್ಲೂಕಿನ ಗಿಲ್ಲೇಸುಗೂರು ಗ್ರಾಮದಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ಬಿಜೆಪಿ ಜನಸಂಕಲ್ಪ ಯಾತ್ರೆಯನ್ನು ಭತ್ತ ತೂರುವ ಮೂಲಕ ವಿನೂತನವಾಗಿ ಉದ್ಘಾಟಿಸಿ ಮಾತನಾಡಿದರು.</p>.<p>‘ರಾಜ್ಯದ ಜನರಿಗೆ ಬರೀ ಸುಳ್ಳು ಹೇಳುವ ಕೆಲಸವನ್ನು ಕಾಂಗ್ರೆಸ್ ನಾಯಕರು ಮಾಡುತ್ತಾ ಬಂದಿದ್ದಾರೆ. ಕಾಂಗ್ರೆಸ್ ಮುಳುಗುವ ಹಡಗು, ಅದರಿಂದ ಜಿಗಿದು ಬಹಳಷ್ಟು ಜನರು ನಮ್ಮಕಡೆಗೆ ಬರುತ್ತಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಬಹಳಷ್ಟು ಬದಲಾವಣೆಗಳನ್ನು ಜನರು ನೋಡಲಿದ್ದಾರೆ’ ಎಂದು ಒಗಟಾಗಿ ನುಡಿದರು.</p>.<p>‘ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳದ ವಿಷಯದಲ್ಲೂ ಅಪಸ್ವರ ಎತ್ತಿ ಮಾತನಾಡುವವರು ನಿಜಕ್ಕೂ ಪರಿಶಿಷ್ಟರ ವಿರೋಧಿಗಳು. ಜನರು ಅಂಥವರಿಗೆ ತಕ್ಕಪಾಠ ಕಲಿಸಬೇಕು. ಬಿಜೆಪಿ ದೃಢಸಂಕಲ್ಪ ಹಾಗೂ ಬಿ.ಎಸ್.ಯಡಿಯೂರಪ್ಪ ಅವರ ಸಹಯೋಗದಲ್ಲಿ ಮೀಸಲಾತಿ ಹೆಚ್ಚಳದ ದಿಟ್ಟ ನಿರ್ಧಾರ ಕೈಗೊಂಡಿದ್ದೇವೆ ಎಂದು ಹೇಳಿದರು.</p>.<p>ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ದೇಶದಲ್ಲಿ ಶೇ 73 ರಷ್ಟು ಜನರು ನರೇಂದ್ರ ಮೋದಿ ಪರ ಒಲವು ಹೊಂದಿದ್ದಾರೆ ಎನ್ನುವುದು ಸಮೀಕ್ಷೆಯಿಂದ ಗೊತ್ತಾಗಿದೆ. ರಾಜ್ಯದಲ್ಲಿ ಬಿಜೆಪಿ 150 ಸ್ಥಾನಗಳಲ್ಲಿ ಗೆಲುವು ನಿಶ್ಚಿತ. ಇದನ್ನು ತಡೆಯುವ ಶಕ್ತಿ ಯಾರಿಗೂ ಇಲ್ಲ ಎಂದರು.</p>.<p>ಶಾಸಕ ಶಿವನಗೌಡ ನಾಯಕ, ಸಚಿವರಾದ ಬಿ.ಶ್ರೀರಾಮುಲು, ಗೋವಿಂದ ಕಾರಜೋಳ, ಬಿಜೆಪಿ ಎಸ್ಟಿ ಮೋರ್ಚಾ ರಾಜ್ಯಾಧ್ಯಕ್ಷ ತಿಪ್ಪರಾಜ ಹವಾಲ್ದಾರ್ ಮಾತನಾಡಿದರು. ಸಂಸದರಾದ ಕರಡಿ ಸಂಗಣ್ಣ, ರಾಜಾ ಅಮರೇಶ್ವರ ನಾಯಕ, ರಾಜ್ಯದ ಬಿಜೆಪಿ ಉಸ್ತುವಾರಿ ಅರುಣಾ ಡಿ.ಕೆ. ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ‘ಕಾಂಗ್ರೆಸ್ ಪಕ್ಷವು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಗೆದ್ದಿರುವ ಸ್ಥಾನಗಳನ್ನಾದರೂ ಉಳಿಸಿಕೊಳ್ಳಲಿ. ಇದು ನನ್ನ ನೇರವಾದ ಸವಾಲು‘ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.</p>.<p>ತಾಲ್ಲೂಕಿನ ಗಿಲ್ಲೇಸುಗೂರು ಗ್ರಾಮದಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ಬಿಜೆಪಿ ಜನಸಂಕಲ್ಪ ಯಾತ್ರೆಯನ್ನು ಭತ್ತ ತೂರುವ ಮೂಲಕ ವಿನೂತನವಾಗಿ ಉದ್ಘಾಟಿಸಿ ಮಾತನಾಡಿದರು.</p>.<p>‘ರಾಜ್ಯದ ಜನರಿಗೆ ಬರೀ ಸುಳ್ಳು ಹೇಳುವ ಕೆಲಸವನ್ನು ಕಾಂಗ್ರೆಸ್ ನಾಯಕರು ಮಾಡುತ್ತಾ ಬಂದಿದ್ದಾರೆ. ಕಾಂಗ್ರೆಸ್ ಮುಳುಗುವ ಹಡಗು, ಅದರಿಂದ ಜಿಗಿದು ಬಹಳಷ್ಟು ಜನರು ನಮ್ಮಕಡೆಗೆ ಬರುತ್ತಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಬಹಳಷ್ಟು ಬದಲಾವಣೆಗಳನ್ನು ಜನರು ನೋಡಲಿದ್ದಾರೆ’ ಎಂದು ಒಗಟಾಗಿ ನುಡಿದರು.</p>.<p>‘ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳದ ವಿಷಯದಲ್ಲೂ ಅಪಸ್ವರ ಎತ್ತಿ ಮಾತನಾಡುವವರು ನಿಜಕ್ಕೂ ಪರಿಶಿಷ್ಟರ ವಿರೋಧಿಗಳು. ಜನರು ಅಂಥವರಿಗೆ ತಕ್ಕಪಾಠ ಕಲಿಸಬೇಕು. ಬಿಜೆಪಿ ದೃಢಸಂಕಲ್ಪ ಹಾಗೂ ಬಿ.ಎಸ್.ಯಡಿಯೂರಪ್ಪ ಅವರ ಸಹಯೋಗದಲ್ಲಿ ಮೀಸಲಾತಿ ಹೆಚ್ಚಳದ ದಿಟ್ಟ ನಿರ್ಧಾರ ಕೈಗೊಂಡಿದ್ದೇವೆ ಎಂದು ಹೇಳಿದರು.</p>.<p>ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ದೇಶದಲ್ಲಿ ಶೇ 73 ರಷ್ಟು ಜನರು ನರೇಂದ್ರ ಮೋದಿ ಪರ ಒಲವು ಹೊಂದಿದ್ದಾರೆ ಎನ್ನುವುದು ಸಮೀಕ್ಷೆಯಿಂದ ಗೊತ್ತಾಗಿದೆ. ರಾಜ್ಯದಲ್ಲಿ ಬಿಜೆಪಿ 150 ಸ್ಥಾನಗಳಲ್ಲಿ ಗೆಲುವು ನಿಶ್ಚಿತ. ಇದನ್ನು ತಡೆಯುವ ಶಕ್ತಿ ಯಾರಿಗೂ ಇಲ್ಲ ಎಂದರು.</p>.<p>ಶಾಸಕ ಶಿವನಗೌಡ ನಾಯಕ, ಸಚಿವರಾದ ಬಿ.ಶ್ರೀರಾಮುಲು, ಗೋವಿಂದ ಕಾರಜೋಳ, ಬಿಜೆಪಿ ಎಸ್ಟಿ ಮೋರ್ಚಾ ರಾಜ್ಯಾಧ್ಯಕ್ಷ ತಿಪ್ಪರಾಜ ಹವಾಲ್ದಾರ್ ಮಾತನಾಡಿದರು. ಸಂಸದರಾದ ಕರಡಿ ಸಂಗಣ್ಣ, ರಾಜಾ ಅಮರೇಶ್ವರ ನಾಯಕ, ರಾಜ್ಯದ ಬಿಜೆಪಿ ಉಸ್ತುವಾರಿ ಅರುಣಾ ಡಿ.ಕೆ. ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>