`ಕೊರೋನಾ ಮತ್ತು ಓಮಿಕ್ರಾನ್ ಸೋಂಕು ಹೆಚ್ಚಳದ ಹಿನ್ನೆಲೆಯಲ್ಲಿ ಪಾದಯಾತ್ರೆಗೆ ಅನುಮತಿಯನ್ನೇ ನೀಡಿರಲಿಲ್ಲ. ಆದರೂ ಅವರು ಭಂಡತನಕ್ಕೆ ಇಳಿದಿದ್ದರು. ಸರಕಾರ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸಿ, ಸೂಕ್ತ ತೀರ್ಮಾನಗಳನ್ನು ತೆಗೆದುಕೊಂಡಿತ್ತು. ಜತೆಗೆ ಹೈಕೋರ್ಟ್ ಕೂಡ ಇತ್ತ ಗಮನ ಹರಿಸಿ, ಕಾಂಗ್ರೆಸ್ ವಿರುದ್ಧ ಚಾಟಿ ಬೀಸಿತು. ಇದರಿಂದ ಮುಖಭಂಗಕ್ಕೊಳಗಾದ ಆ ಪಕ್ಷಕ್ಕೆ ಪಾದಯಾತ್ರೆ ನಿಲ್ಲಿಸದೆ ಬೇರೆ ಗತಿ ಇರಲಿಲ್ಲ’ ಎಂದು ಅಶ್ವತ್ಥನಾರಾಯಣ ಹೇಳಿದ್ದಾರೆ.