ಕೋವಿಡ್ ಸಂದರ್ಭದಲ್ಲಿ ತಬ್ಲಿಘಿಗಳ ಬೆನ್ನಿಗೆ ನಿಂತು ಗಲಭೆ ಮಾಡಿಸಿತ್ತು. ಪೌರತ್ವ ಕಾಯ್ದೆ ವಿರುದ್ಧ ನಡೆದ ಹೋರಾಟ ಮತ್ತು ದೆಹಲಿಯಲ್ಲಿ ನಡೆದ ಗಲಭೆಗೆ ಕಾಂಗ್ರೆಸ್ನ ಬೆಂಬಲವಿತ್ತು. ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿಯಲ್ಲಿ ಗಲಭೆ ಮಾಡಿಸಿದ್ದೂ ಇವರೇ. ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ಇವರಿಗೆ ನಂಬಿಕೆ ಇಲ್ಲ. ವಿಧಾನಪರಿಷತ್ನಲ್ಲಿ ಕಾಂಗ್ರೆಸ್ನವರೇ ಗದ್ದಲ ನಡೆಸಿದ್ದು. ಇವೆಲ್ಲಾ ಕೃತ್ಯಗಳಿಗೆ ಜನರ ಬಳಿ ಕ್ಷಮೆ ಕೇಳಬೇಕು ಎಂದು ನಳಿನ್ ಒತ್ತಾಯಿಸಿದರು.