ರಾಮನಗರ ಕ್ಷೇತ್ರದಿಂದ ಡಿ.ಕೆ. ಸುರೇಶ್ ಸ್ಪರ್ಧೆ ಕುರಿತು ಮಂಗಳವಾರ ಪತ್ರಕರ್ತರಿಗೆ ಅವರು ಪ್ರತಿಕ್ರಿಯೆ ನೀಡಿದರು. ‘ ಮಂಡ್ಯದಲ್ಲಿ ಬಿಜೆಪಿ, ಕಾಂಗ್ರೆಸ್, ರೈತ ಸಂಘದವರು ಸೇರಿ ಚಕ್ರವ್ಯೂಹ ರಚಿಸಿ ನನ್ನನ್ನು ಸೋಲಿಸಿದ್ದರು. ಆದರೆ 5 ಲಕ್ಷಕ್ಕೂ ಹೆಚ್ಚು ಮತಗಳನ್ನು ಪಡೆದಿದೆ. ಅಭ್ಯರ್ಥಿಗಳನ್ನು ಹಾಕುವುದು ಆಯಾ ಪಕ್ಷಕ್ಕೆ ಬಿಟ್ಟ ವಿಚಾರ. ಅದನ್ನು ಅವರ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಪ್ರಜಾಪ್ರಭುತ್ವದಲ್ಲಿ ಯಾರು ಎಲ್ಲಿ ಬೇಕಾದರೂ ನಿಲ್ಲಬಹುದು’ ಎಂದರು.