ಸಭಾಧ್ಯಕ್ಷರ ಪೀಠದ ಎದುರು ಧಾವಿಸಿದ ಬಿಜೆಪಿಯ ಬಸನಗೌಡ ಪಾಟೀಲ, ಅರವಿಂದ ಬೆಲ್ಲದ್, ಕಾಂಗ್ರೆಸ್ ಸದಸ್ಯರಾದ ಡಾ. ಯತೀಂದ್ರ ಸಿದ್ದರಾಮಯ್ಯ, ರಾಘವೇಂದ್ರ ಹಿಟ್ನಾಳ್, ಜೆಡಿಎಸ್ ನ ಬಂಡೆಪ್ಪ ಕಾಶೆಂಪುರ, ವೆಂಕಟರಾವ್ ನಾಡಗೌಡ ಸೇರಿದಂತೆ ಹಲವು ಶಾಸಕರು ಧರಣಿ ಆರಂಭಿಸಿದರು. ಧರಣಿ ಸ್ಥಳಕ್ಕೆ ಧಾವಿಸುತ್ತಿದ್ದ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರನ್ನು ಗದರಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಡೆದರು.