ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲ್ಯಾಣ ಕರ್ನಾಟಕವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿರುವ ಬಿಜೆಪಿ: ಕಾಂಗ್ರೆಸ್‌ ಆರೋಪ

Last Updated 12 ಸೆಪ್ಟೆಂಬರ್ 2021, 9:56 IST
ಅಕ್ಷರ ಗಾತ್ರ

ಬೆಂಗಳೂರು: 'ಕಣ್ಣಿಗೆ ಕಾಣದ ಕಲ್ಯಾಣ' ಎಂಬ ಪ್ರಜಾವಾಣಿಯ ಒಳನೋಟದ ವರದಿಯನ್ನು ಉಲ್ಲೇಖಿಸಿ ಕಾಂಗ್ರೆಸ್‌ ಭಾನುವಾರ ಟ್ವೀಟ್‌ ಮಾಡಿದೆ.

ಬಿಜೆಪಿಯು ಕಲ್ಯಾಣ ಕರ್ನಾಟಕವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ ಎಂದು ಟ್ವೀಟ್‌ನಲ್ಲಿ ಆರೋಪಿಸಿದೆ.

'ಬಿಜೆಪಿಗೆ ಬೇಕಿರುವುದು ಅಧಿಕಾರವಷ್ಟೇ ಅಭಿವೃದ್ಧಿಯಲ್ಲ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ನೀಡಬೇಕಿದ್ದ ವಿಶೇಷ ಅನುದಾನವನ್ನು ಕೇಂದ್ರ ಸರ್ಕಾರ ನೀಡಿಲ್ಲ. ರಾಜ್ಯ ಸರ್ಕಾರದಿಂದ ಪೂರ್ಣ ಅನುದಾನ ಸಿಕ್ಕಿಲ್ಲ' ಎಂದು ಕಾಂಗ್ರೆಸ್‌ ವಾಗ್ದಾಳಿ ನಡೆಸಿದೆ.

'ಕಲ್ಯಾಣ ಕರ್ನಾಟಕ ಭಾಗವನ್ನು ಸಂಪೂರ್ಣ ಕಡೆಗಣಿಸಿರುವ ಬಿಜೆಪಿಯು ಯಾವ ನೈತಿಕತೆಯ ಆಧಾರದಲ್ಲಿ ಕಲಬುರಗಿಯ ಪಾಲಿಕೆ ಅಧಿಕಾರಕ್ಕಾಗಿ ಹಪಹಪಿಸುತ್ತಿದೆ?' ಎಂದು ಕೆಪಿಸಿಸಿ ಪ್ರಶ್ನಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT