ಈ ವಿಚಾರವಾಗಿ ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯ ಘಟಕವು, ‘ಪರಿಷತ್ ಚುನಾವಣೆಯಲ್ಲಿ ಯಾರಾದರೂ ಬಂಡಾಯವಾಗಿ ಸ್ಪರ್ಧಿಸಿದರೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಡಿಕೆಶಿ ಎಚ್ಚರಿಸಿದ್ದಾರೆ. ಆದರೆ, ಡಿಕೆಶಿ ತಕ್ಕಡಿ ಎದ್ದೇಳುತ್ತಿಲ್ಲ ಎಂದು ಕೆಪಿಸಿಸಿ ಕಚೇರಿಯಲ್ಲೇ ವ್ಯಂಗ್ಯವಾಡಿದ್ದ ಉಗ್ರಪ್ಪ ವಿರುದ್ಧ ಏಕೆ ಇನ್ನೂ ಕ್ರಮ ತೆಗೆದುಕೊಂಡಿಲ್ಲ? ಭಯವೋ, ಬೆದರಿಕೆಯೋ?‘ ಎಂದು ಲೇವಡಿ ಮಾಡಿದೆ.