ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಭ್ಯರ್ಥಿಗಳಿಂದ ಹಣ ವಸೂಲಿ ಮಾಡಲು ಕಾಂಗ್ರೆಸ್‌ ತೀರ್ಮಾನ: ಬಿಜೆಪಿ ಆರೋಪ

Last Updated 16 ಸೆಪ್ಟೆಂಬರ್ 2021, 11:57 IST
ಅಕ್ಷರ ಗಾತ್ರ

ಬೆಂಗಳೂರು: ಕಾರ್ಪೊರೇಶನ್‌ ಚುನಾವಣೆಯಲ್ಲಿ ಅಭ್ಯರ್ಥಿಗಳಿಂದ ₹5 ರಿಂದ ₹10 ಸಾವಿರ ಸಂಗ್ರಹಿಸಿದ್ದ ಕಾಂಗ್ರೆಸ್‌ ಪಕ್ಷ ಮುಂದಿನ ವಿಧಾನಸಭೆ ಚುನಾವಣೆಗಾಗಿ ₹1 ಲಕ್ಷ ವಸೂಲಿ ಮಾಡಲು ತೀರ್ಮಾನಿಸಿದೆ ಎಂದು ಬಿಜೆಪಿ ಆರೋಪಿಸಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಹೇಳಿಕೆಯುಳ್ಳ ವಿಡಿಯೊವನ್ನು ಟ್ವೀಟ್‌ ಮಾಡಿರುವ ಬಿಜೆಪಿ, 'ಕಾಂಗ್ರೆಸ್‌ ಪಕ್ಷ ಅಧಿಕಾರದಲ್ಲಿದ್ದಾಗ ಜನರನ್ನು ಲೂಟಿ ಮಾಡಿತ್ತು. ಈಗ ತನ್ನ ಪಕ್ಷದವರನ್ನೇ ಬಹಿರಂಗವಾಗಿ ಲೂಟಿ ಮಾಡುತ್ತಿದೆ' ಎಂದು ವಾಗ್ದಾಳಿ ನಡೆಸಿದೆ.

'ಕಾರ್ಪೊರೇಶನ್‌ ಚುನಾವಣೆಯಲ್ಲಿ ₹5 ರಿಂದ ₹10 ಸಾವಿರ ಸಂಗ್ರಹಿಸಿದ್ದ ಕಾಂಗ್ರೆಸ್‌ ಪಕ್ಷ ಮುಂದಿನ ಚುನಾವಣೆಗಾಗಿ ₹1 ಲಕ್ಷ ವಸೂಲಿ ಮಾಡಲು ತೀರ್ಮಾನಿಸಿದೆ' ಎಂದು ಟೀಕಿಸಿದೆ.

ಇದರಲ್ಲಿ ನಿಮ್ಮ ಪಾಲೆಷ್ಟು ಎಂದು ಡಿ.ಕೆ.ಶಿವಕುಮಾರ್‌ ಅವರನ್ನು ಬಿಜೆಪಿ ಪ್ರಶ್ನಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT